ಮಂಡ್ಯ

ರಾಜ್ಯ ಸರ್ಕಾರ ಕುರ್ಚಿ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡುತ್ತಿದೆ : ಅಶ್ವಥ್‌ ನಾರಾಯಾಣ್‌

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು‌ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ವತಿಯಿಂದ ನಡೆಯುತ್ತಿರುವ ಚಡ್ಡಿ ಚಳವಳಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರೈತರ ಪರವಾಗಿ ಹೋರಾಟ ಮಾಡುತ್ತಿದೆ. ಇಂದು ಮಂಡ್ಯ ರೈತರ ಟ್ರೇಡ್ ಮಾರ್ಕ್ ಆಗಿರೋ ಪಟಾಪಟಿ‌ ಚಡ್ಡಿ ಧರಿಸಿ ಪ್ರತಿಭಟನೆ ಮಾಡುತ್ತಿದ್ದೇವೆ, ತಮಿಳುನಾಡಿಗೆ ಬಿಡುತ್ತಿರೋ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ನೀರನ್ನು ಬಿಡಲ್ಲ ಎಂದು ಹೇಳಿದವರು ಅಧಿಕಾರ ಹೊರಟು ಹೋಗುತ್ತೆ ಎಂದು ನೀರು ಬಿಡುತ್ತಿದ್ದಾರೆ. ತಮಿಳುನಾಡಿನವರಿಗೆ ಎರಡನೇ ಬೆಳೆಗೆ ನೀರು ಕೊಡುತ್ತಿದ್ದಾರೆ. ನಮ‌್ಮ ಒಂದು ಬೆಳಗೆ ನೀರಿಲ್ಲ. ತಮಿಳುನಾಡಿನವರು ಮೂರು‌ ಬೆಳೆ ಬೆಳೆಯಬಹುದು. ನಾವು‌ ಒಂದು‌ ಬೆಳೆ ಬೆಳೆಯಬಾರದಾ ಎಂದು ಪ್ರಶ್ನಿಸಿದರು.

ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ರು. ಪೆನ್ನು ಪೇಪರ್ ಕೊಟ್ಟರೆ ಇವರಿಗೆ ಏನು ಬೇಕು ಅದನ್ನು ಬರೆದುಕೊಳ್ಳುತ್ತಿದ್ದಾರೆ. ಕಾವೇರಿ ನೀರು ಕುಡಿಯಲು ಕೊಡಿ ಅಂದ್ರೆ ವಿಸ್ಕಿ, ಬ್ರಾಂದಿ‌ ಕೊಡ್ತೀವಿ ಎನ್ನುತ್ತಾರೆ. ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡ್ತಾರೆ. ಈ ಸರ್ಕಾರ ವಿಸ್ಕಿ, ಬ್ರಾಂದಿ, ರಮ್ ಕೊಡೋ ಸರ್ಕಾರ. ನೀರು ಕೊಡೋ ಸರ್ಕಾರ ಬಿಜೆಪಿ ಎಂದರು.

ಸೆಟೆಲ್‌ ಮೆಂಟ್ ಮಾಡಿದೀವಿ ಅಂತಾ ಹೇಳ್ತಾರೆ. ಏನ್ ಸೆಟೆಲ್‌ಮೆಂಟ್ ಮಾಡಿದ್ದಾರೆ ಇವರು. ಕೇವಲ ವಿಸ್ಕಿ, ಬ್ರಾಂದಿ, ರಮ್ ಕುಡಿಸುತ್ತಿದ್ದಾರೆ ಇವರು ಅಷ್ಟೇ. ಇವರ ಚಡ್ಡಿ ಇಳಿಸಿ, ಅಧಿಕಾರದಿಂದ ಇಳಿಸುವ ಶಕ್ತಿ ಮಂಡ್ಯಗೆ ಇದೆ. ಇದಕ್ಕೆ ಇಂದಿನ ಚಡ್ಡಿ ಮೆರವಣಿಗೆಯೇ ಸಾಕ್ಷಿ ಎಂದು ಹೇಳಿದರು.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

58 mins ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

3 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

3 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

3 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

5 hours ago