ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ವತಿಯಿಂದ ನಡೆಯುತ್ತಿರುವ ಚಡ್ಡಿ ಚಳವಳಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರೈತರ ಪರವಾಗಿ ಹೋರಾಟ ಮಾಡುತ್ತಿದೆ. ಇಂದು ಮಂಡ್ಯ ರೈತರ ಟ್ರೇಡ್ ಮಾರ್ಕ್ ಆಗಿರೋ ಪಟಾಪಟಿ ಚಡ್ಡಿ ಧರಿಸಿ ಪ್ರತಿಭಟನೆ ಮಾಡುತ್ತಿದ್ದೇವೆ, ತಮಿಳುನಾಡಿಗೆ ಬಿಡುತ್ತಿರೋ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ನೀರನ್ನು ಬಿಡಲ್ಲ ಎಂದು ಹೇಳಿದವರು ಅಧಿಕಾರ ಹೊರಟು ಹೋಗುತ್ತೆ ಎಂದು ನೀರು ಬಿಡುತ್ತಿದ್ದಾರೆ. ತಮಿಳುನಾಡಿನವರಿಗೆ ಎರಡನೇ ಬೆಳೆಗೆ ನೀರು ಕೊಡುತ್ತಿದ್ದಾರೆ. ನಮ್ಮ ಒಂದು ಬೆಳಗೆ ನೀರಿಲ್ಲ. ತಮಿಳುನಾಡಿನವರು ಮೂರು ಬೆಳೆ ಬೆಳೆಯಬಹುದು. ನಾವು ಒಂದು ಬೆಳೆ ಬೆಳೆಯಬಾರದಾ ಎಂದು ಪ್ರಶ್ನಿಸಿದರು.
ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ರು. ಪೆನ್ನು ಪೇಪರ್ ಕೊಟ್ಟರೆ ಇವರಿಗೆ ಏನು ಬೇಕು ಅದನ್ನು ಬರೆದುಕೊಳ್ಳುತ್ತಿದ್ದಾರೆ. ಕಾವೇರಿ ನೀರು ಕುಡಿಯಲು ಕೊಡಿ ಅಂದ್ರೆ ವಿಸ್ಕಿ, ಬ್ರಾಂದಿ ಕೊಡ್ತೀವಿ ಎನ್ನುತ್ತಾರೆ. ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡ್ತಾರೆ. ಈ ಸರ್ಕಾರ ವಿಸ್ಕಿ, ಬ್ರಾಂದಿ, ರಮ್ ಕೊಡೋ ಸರ್ಕಾರ. ನೀರು ಕೊಡೋ ಸರ್ಕಾರ ಬಿಜೆಪಿ ಎಂದರು.
ಸೆಟೆಲ್ ಮೆಂಟ್ ಮಾಡಿದೀವಿ ಅಂತಾ ಹೇಳ್ತಾರೆ. ಏನ್ ಸೆಟೆಲ್ಮೆಂಟ್ ಮಾಡಿದ್ದಾರೆ ಇವರು. ಕೇವಲ ವಿಸ್ಕಿ, ಬ್ರಾಂದಿ, ರಮ್ ಕುಡಿಸುತ್ತಿದ್ದಾರೆ ಇವರು ಅಷ್ಟೇ. ಇವರ ಚಡ್ಡಿ ಇಳಿಸಿ, ಅಧಿಕಾರದಿಂದ ಇಳಿಸುವ ಶಕ್ತಿ ಮಂಡ್ಯಗೆ ಇದೆ. ಇದಕ್ಕೆ ಇಂದಿನ ಚಡ್ಡಿ ಮೆರವಣಿಗೆಯೇ ಸಾಕ್ಷಿ ಎಂದು ಹೇಳಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…