ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ವತಿಯಿಂದ ನಡೆಯುತ್ತಿರುವ ಚಡ್ಡಿ ಚಳವಳಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರೈತರ ಪರವಾಗಿ ಹೋರಾಟ ಮಾಡುತ್ತಿದೆ. ಇಂದು ಮಂಡ್ಯ ರೈತರ ಟ್ರೇಡ್ ಮಾರ್ಕ್ ಆಗಿರೋ ಪಟಾಪಟಿ ಚಡ್ಡಿ ಧರಿಸಿ ಪ್ರತಿಭಟನೆ ಮಾಡುತ್ತಿದ್ದೇವೆ, ತಮಿಳುನಾಡಿಗೆ ಬಿಡುತ್ತಿರೋ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ನೀರನ್ನು ಬಿಡಲ್ಲ ಎಂದು ಹೇಳಿದವರು ಅಧಿಕಾರ ಹೊರಟು ಹೋಗುತ್ತೆ ಎಂದು ನೀರು ಬಿಡುತ್ತಿದ್ದಾರೆ. ತಮಿಳುನಾಡಿನವರಿಗೆ ಎರಡನೇ ಬೆಳೆಗೆ ನೀರು ಕೊಡುತ್ತಿದ್ದಾರೆ. ನಮ್ಮ ಒಂದು ಬೆಳಗೆ ನೀರಿಲ್ಲ. ತಮಿಳುನಾಡಿನವರು ಮೂರು ಬೆಳೆ ಬೆಳೆಯಬಹುದು. ನಾವು ಒಂದು ಬೆಳೆ ಬೆಳೆಯಬಾರದಾ ಎಂದು ಪ್ರಶ್ನಿಸಿದರು.
ಪೆನ್ನು ಪೇಪರ್ ಕೊಡಿ ಎಂದು ಕೇಳಿದ್ರು. ಪೆನ್ನು ಪೇಪರ್ ಕೊಟ್ಟರೆ ಇವರಿಗೆ ಏನು ಬೇಕು ಅದನ್ನು ಬರೆದುಕೊಳ್ಳುತ್ತಿದ್ದಾರೆ. ಕಾವೇರಿ ನೀರು ಕುಡಿಯಲು ಕೊಡಿ ಅಂದ್ರೆ ವಿಸ್ಕಿ, ಬ್ರಾಂದಿ ಕೊಡ್ತೀವಿ ಎನ್ನುತ್ತಾರೆ. ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡ್ತಾರೆ. ಈ ಸರ್ಕಾರ ವಿಸ್ಕಿ, ಬ್ರಾಂದಿ, ರಮ್ ಕೊಡೋ ಸರ್ಕಾರ. ನೀರು ಕೊಡೋ ಸರ್ಕಾರ ಬಿಜೆಪಿ ಎಂದರು.
ಸೆಟೆಲ್ ಮೆಂಟ್ ಮಾಡಿದೀವಿ ಅಂತಾ ಹೇಳ್ತಾರೆ. ಏನ್ ಸೆಟೆಲ್ಮೆಂಟ್ ಮಾಡಿದ್ದಾರೆ ಇವರು. ಕೇವಲ ವಿಸ್ಕಿ, ಬ್ರಾಂದಿ, ರಮ್ ಕುಡಿಸುತ್ತಿದ್ದಾರೆ ಇವರು ಅಷ್ಟೇ. ಇವರ ಚಡ್ಡಿ ಇಳಿಸಿ, ಅಧಿಕಾರದಿಂದ ಇಳಿಸುವ ಶಕ್ತಿ ಮಂಡ್ಯಗೆ ಇದೆ. ಇದಕ್ಕೆ ಇಂದಿನ ಚಡ್ಡಿ ಮೆರವಣಿಗೆಯೇ ಸಾಕ್ಷಿ ಎಂದು ಹೇಳಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…