ಮಂಡ್ಯ

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಕನತಾದರ್ಶನ ಕಾರ್ಯಕ್ರಮದಲ್ಲಿ ಎಚ್‌ಡಿಕೆ ಗರಂ

ಮಂಡ್ಯ: ‘ಎಚ್‌.ಎಂ.ಟಿ. ಕಾರ್ಖಾನೆ, ಭದ್ರಾವತಿಯ ವಿ.ಐ.ಎಸ್‌.ಎಲ್‌. ಕಾರ್ಖಾನೆ ಮತ್ತು ಆಂಧ್ರಪ್ರದೇಶದ ವೈಜಾಗ್‌ನ ಆರ್‌.ಐ.ಎನ್‌.ಎಲ್‌. ಸ್ಟೀಲ್‌ ಪ್ಲಾಂಟ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ’ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ನಗರದಲ್ಲಿ ಶುಕ್ರವಾರ ಜನತಾದರ್ಶನ ಕಾರ್ಯಕ್ರಮ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಆರು ರಾಜ್ಯಗಳಲ್ಲಿರುವ ಎಚ್‌.ಎಂ.ಟಿ. ಕಾರ್ಖಾನೆಯ ಶಾಖೆಗಳಿಗೆ ಭೇಟಿ ಕೊಟ್ಟು ಯಾವ ರೀತಿಯ ಪುನಃಶ್ಚೇತನ ಮಾಡಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ದೆಹಲಿಯ ಉದ್ಯೋಗ ಭವನದಲ್ಲಿ ನಿತ್ಯ ಸರ್ಕಾರಿ ಕೈಗಾರಿಕೆಗಳ ಪುನಃಶ್ಚೇತನದ ಬಗ್ಗೆ ಸಭೆ ನಡೆಸುತ್ತಿದ್ದೇನೆ ಎಂದರು.

1918ರಿಂದ ಪ್ರಾರಂಭವಾಗಿರುವ ಅನೇಕ ಕೈಗಾರಿಕೆಗಳು ಸ್ಥಗಿತಗೊಂಡಿವೆ. ಇವುಗಳಿಗೆ ಶಕ್ತಿ ತುಂಬಿ, ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತೇನೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ನನಗೆ ಇನ್ನೂ 3 ತಿಂಗಳು ಕಾಲಾವಕಾಶ ಬೇಕು ಎಂದು ತಿಳಿಸಿದರು.

ಭೂಮಿ ನುಂಗಿದವರು ಯಾರು?: 1974ರಲ್ಲಿ ಎಚ್‌.ಎಂ.ಟಿ. ಕಾರ್ಖಾನೆ ಪ್ರಾರಂಭವಾದಾಗ 8 ಸಾವಿರ ಮಂದಿ ಉದ್ಯೋಗ ಮಾಡುತ್ತಿದ್ದರು. ಅಲ್ಲಿ ₹280 ಕೋಟಿ ಆದಾಯ ಬರುತ್ತಿತ್ತು. 350 ಎಂಜಿನಿಯರುಗಳು ಹೊಸದಾಗಿ ಆರಂಭವಾದ ಖಾಸಗಿ ಕಾರ್ಖಾನೆಗೆ ವಲಸೆ ಹೋದರು. ಅಲ್ಲಿಗೆ ಎಚ್‌.ಎಂ.ಟಿ. ಕತೆ ಮುಗಿಯಿತು. ಎಚ್‌ಎಂಟಿ ಭೂಮಿ ಯಾರ‍್ಯಾರು ಕಬಳಿಸಿದ್ದಾರೆ ಎಂಬುದನ್ನು ರಾಜ್ಯ ಸರ್ಕಾರ ತನಿಖೆ ಮಾಡಲು ಸಿದ್ಧವಿದೆಯೇ? ಎಂದು ಸವಾಲು ಹಾಕಿದರು.

ಪ್ರೋಟೊಕಾಲ್‌ ನಂಬಿ ರಾಜಕಾರಣ ಮಾಡಲ್ಲ: ಜನತಾ ದರ್ಶನಕ್ಕೆ ಬಂದ ಸಾವಿರಾರು ಜನರನ್ನು ನಿಯಂತ್ರಿಸಲು ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ಕೊರತೆ ಕಾಡಿತು. ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರವೇ ಸುತ್ತೋಲೆ ಹೊರಡಿಸಿತು. ರಾಜ್ಯ ಸರ್ಕಾರದ ಪ್ರೊಟೋಕಾಲ್‌ ನಂಬಿ ನಾನು ರಾಜಕಾರಣ ಮಾಡುತ್ತಿಲ್ಲ. ನನ್ನನ್ನು ನಿಮ್ಮ ಜಿಲ್ಲೆಗೆ (ರಾಮನಗರ) ಬಂದಾಗ ಯಾವ ರೀತಿ ನಡೆಸಿಕೊಂಡಿದ್ದೀರಿ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದರಲ್ಲಿ ಸಂಶಯವೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರ್ಜಿ ಹಿಡಿದುಕೊಂಡು ಬಂದಿರಲಿಲ್ಲವೇ?: ಕರ್ನಾಟಕ ರಾಜ್ಯ ಸರ್ಕಾರದ ಬೇಡಿಕೆಗಳನ್ನು ಕಾರ್ಯರೂಪಕ್ಕೆ ತರಲು ಮುಖ್ಯಮಂತ್ರಿ ಮತ್ತು ಸಚಿವರ ದಂಡು ಮೊನ್ನೆ ದೆಹಲಿಗೆ ಬಂದಿತ್ತು. ಆಗ ಯಾರ ಮುಂದೆ ಅರ್ಜಿ ಹಿಡಿದುಕೊಂಡು ಬಂದಿದ್ದರು? ನಮ್ಮ ಹತ್ತಿರ ಬಂದಿರಲಿಲ್ಲವೇ? ಒಕ್ಕೂಟ ವ್ಯವಸ್ಥೆಯಲ್ಲಿ ಎರಡೂ ಸರ್ಕಾರಗಳಿಗೂ ಜವಾಬ್ದಾರಿ ಇದೆ. ಇದನ್ನು ಅರ್ಥಮಾಡಿಕೊಳ್ಳಲಿ. ಕೇಂದ್ರ ಸಚಿವರಿಗೆ ಯಾವ ರೀತಿ ಭದ್ರತೆ ಕೊಡಬೇಕು ಎಂಬುದು ಈ ರಾಜ್ಯ ಸರ್ಕಾರಕ್ಕೆ ಜ್ಞಾನ ಇದೆಯಾ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

10 mins ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

15 mins ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

46 mins ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

2 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

2 hours ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

2 hours ago