ಮಂಡ್ಯ

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಕನತಾದರ್ಶನ ಕಾರ್ಯಕ್ರಮದಲ್ಲಿ ಎಚ್‌ಡಿಕೆ ಗರಂ

ಮಂಡ್ಯ: ‘ಎಚ್‌.ಎಂ.ಟಿ. ಕಾರ್ಖಾನೆ, ಭದ್ರಾವತಿಯ ವಿ.ಐ.ಎಸ್‌.ಎಲ್‌. ಕಾರ್ಖಾನೆ ಮತ್ತು ಆಂಧ್ರಪ್ರದೇಶದ ವೈಜಾಗ್‌ನ ಆರ್‌.ಐ.ಎನ್‌.ಎಲ್‌. ಸ್ಟೀಲ್‌ ಪ್ಲಾಂಟ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ’ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ನಗರದಲ್ಲಿ ಶುಕ್ರವಾರ ಜನತಾದರ್ಶನ ಕಾರ್ಯಕ್ರಮ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಆರು ರಾಜ್ಯಗಳಲ್ಲಿರುವ ಎಚ್‌.ಎಂ.ಟಿ. ಕಾರ್ಖಾನೆಯ ಶಾಖೆಗಳಿಗೆ ಭೇಟಿ ಕೊಟ್ಟು ಯಾವ ರೀತಿಯ ಪುನಃಶ್ಚೇತನ ಮಾಡಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ದೆಹಲಿಯ ಉದ್ಯೋಗ ಭವನದಲ್ಲಿ ನಿತ್ಯ ಸರ್ಕಾರಿ ಕೈಗಾರಿಕೆಗಳ ಪುನಃಶ್ಚೇತನದ ಬಗ್ಗೆ ಸಭೆ ನಡೆಸುತ್ತಿದ್ದೇನೆ ಎಂದರು.

1918ರಿಂದ ಪ್ರಾರಂಭವಾಗಿರುವ ಅನೇಕ ಕೈಗಾರಿಕೆಗಳು ಸ್ಥಗಿತಗೊಂಡಿವೆ. ಇವುಗಳಿಗೆ ಶಕ್ತಿ ತುಂಬಿ, ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತೇನೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ನನಗೆ ಇನ್ನೂ 3 ತಿಂಗಳು ಕಾಲಾವಕಾಶ ಬೇಕು ಎಂದು ತಿಳಿಸಿದರು.

ಭೂಮಿ ನುಂಗಿದವರು ಯಾರು?: 1974ರಲ್ಲಿ ಎಚ್‌.ಎಂ.ಟಿ. ಕಾರ್ಖಾನೆ ಪ್ರಾರಂಭವಾದಾಗ 8 ಸಾವಿರ ಮಂದಿ ಉದ್ಯೋಗ ಮಾಡುತ್ತಿದ್ದರು. ಅಲ್ಲಿ ₹280 ಕೋಟಿ ಆದಾಯ ಬರುತ್ತಿತ್ತು. 350 ಎಂಜಿನಿಯರುಗಳು ಹೊಸದಾಗಿ ಆರಂಭವಾದ ಖಾಸಗಿ ಕಾರ್ಖಾನೆಗೆ ವಲಸೆ ಹೋದರು. ಅಲ್ಲಿಗೆ ಎಚ್‌.ಎಂ.ಟಿ. ಕತೆ ಮುಗಿಯಿತು. ಎಚ್‌ಎಂಟಿ ಭೂಮಿ ಯಾರ‍್ಯಾರು ಕಬಳಿಸಿದ್ದಾರೆ ಎಂಬುದನ್ನು ರಾಜ್ಯ ಸರ್ಕಾರ ತನಿಖೆ ಮಾಡಲು ಸಿದ್ಧವಿದೆಯೇ? ಎಂದು ಸವಾಲು ಹಾಕಿದರು.

ಪ್ರೋಟೊಕಾಲ್‌ ನಂಬಿ ರಾಜಕಾರಣ ಮಾಡಲ್ಲ: ಜನತಾ ದರ್ಶನಕ್ಕೆ ಬಂದ ಸಾವಿರಾರು ಜನರನ್ನು ನಿಯಂತ್ರಿಸಲು ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ಕೊರತೆ ಕಾಡಿತು. ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರವೇ ಸುತ್ತೋಲೆ ಹೊರಡಿಸಿತು. ರಾಜ್ಯ ಸರ್ಕಾರದ ಪ್ರೊಟೋಕಾಲ್‌ ನಂಬಿ ನಾನು ರಾಜಕಾರಣ ಮಾಡುತ್ತಿಲ್ಲ. ನನ್ನನ್ನು ನಿಮ್ಮ ಜಿಲ್ಲೆಗೆ (ರಾಮನಗರ) ಬಂದಾಗ ಯಾವ ರೀತಿ ನಡೆಸಿಕೊಂಡಿದ್ದೀರಿ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದರಲ್ಲಿ ಸಂಶಯವೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರ್ಜಿ ಹಿಡಿದುಕೊಂಡು ಬಂದಿರಲಿಲ್ಲವೇ?: ಕರ್ನಾಟಕ ರಾಜ್ಯ ಸರ್ಕಾರದ ಬೇಡಿಕೆಗಳನ್ನು ಕಾರ್ಯರೂಪಕ್ಕೆ ತರಲು ಮುಖ್ಯಮಂತ್ರಿ ಮತ್ತು ಸಚಿವರ ದಂಡು ಮೊನ್ನೆ ದೆಹಲಿಗೆ ಬಂದಿತ್ತು. ಆಗ ಯಾರ ಮುಂದೆ ಅರ್ಜಿ ಹಿಡಿದುಕೊಂಡು ಬಂದಿದ್ದರು? ನಮ್ಮ ಹತ್ತಿರ ಬಂದಿರಲಿಲ್ಲವೇ? ಒಕ್ಕೂಟ ವ್ಯವಸ್ಥೆಯಲ್ಲಿ ಎರಡೂ ಸರ್ಕಾರಗಳಿಗೂ ಜವಾಬ್ದಾರಿ ಇದೆ. ಇದನ್ನು ಅರ್ಥಮಾಡಿಕೊಳ್ಳಲಿ. ಕೇಂದ್ರ ಸಚಿವರಿಗೆ ಯಾವ ರೀತಿ ಭದ್ರತೆ ಕೊಡಬೇಕು ಎಂಬುದು ಈ ರಾಜ್ಯ ಸರ್ಕಾರಕ್ಕೆ ಜ್ಞಾನ ಇದೆಯಾ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago