ಮಂಡ್ಯ

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಕನತಾದರ್ಶನ ಕಾರ್ಯಕ್ರಮದಲ್ಲಿ ಎಚ್‌ಡಿಕೆ ಗರಂ

ಮಂಡ್ಯ: ‘ಎಚ್‌.ಎಂ.ಟಿ. ಕಾರ್ಖಾನೆ, ಭದ್ರಾವತಿಯ ವಿ.ಐ.ಎಸ್‌.ಎಲ್‌. ಕಾರ್ಖಾನೆ ಮತ್ತು ಆಂಧ್ರಪ್ರದೇಶದ ವೈಜಾಗ್‌ನ ಆರ್‌.ಐ.ಎನ್‌.ಎಲ್‌. ಸ್ಟೀಲ್‌ ಪ್ಲಾಂಟ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ’ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ನಗರದಲ್ಲಿ ಶುಕ್ರವಾರ ಜನತಾದರ್ಶನ ಕಾರ್ಯಕ್ರಮ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಆರು ರಾಜ್ಯಗಳಲ್ಲಿರುವ ಎಚ್‌.ಎಂ.ಟಿ. ಕಾರ್ಖಾನೆಯ ಶಾಖೆಗಳಿಗೆ ಭೇಟಿ ಕೊಟ್ಟು ಯಾವ ರೀತಿಯ ಪುನಃಶ್ಚೇತನ ಮಾಡಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ದೆಹಲಿಯ ಉದ್ಯೋಗ ಭವನದಲ್ಲಿ ನಿತ್ಯ ಸರ್ಕಾರಿ ಕೈಗಾರಿಕೆಗಳ ಪುನಃಶ್ಚೇತನದ ಬಗ್ಗೆ ಸಭೆ ನಡೆಸುತ್ತಿದ್ದೇನೆ ಎಂದರು.

1918ರಿಂದ ಪ್ರಾರಂಭವಾಗಿರುವ ಅನೇಕ ಕೈಗಾರಿಕೆಗಳು ಸ್ಥಗಿತಗೊಂಡಿವೆ. ಇವುಗಳಿಗೆ ಶಕ್ತಿ ತುಂಬಿ, ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತೇನೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ನನಗೆ ಇನ್ನೂ 3 ತಿಂಗಳು ಕಾಲಾವಕಾಶ ಬೇಕು ಎಂದು ತಿಳಿಸಿದರು.

ಭೂಮಿ ನುಂಗಿದವರು ಯಾರು?: 1974ರಲ್ಲಿ ಎಚ್‌.ಎಂ.ಟಿ. ಕಾರ್ಖಾನೆ ಪ್ರಾರಂಭವಾದಾಗ 8 ಸಾವಿರ ಮಂದಿ ಉದ್ಯೋಗ ಮಾಡುತ್ತಿದ್ದರು. ಅಲ್ಲಿ ₹280 ಕೋಟಿ ಆದಾಯ ಬರುತ್ತಿತ್ತು. 350 ಎಂಜಿನಿಯರುಗಳು ಹೊಸದಾಗಿ ಆರಂಭವಾದ ಖಾಸಗಿ ಕಾರ್ಖಾನೆಗೆ ವಲಸೆ ಹೋದರು. ಅಲ್ಲಿಗೆ ಎಚ್‌.ಎಂ.ಟಿ. ಕತೆ ಮುಗಿಯಿತು. ಎಚ್‌ಎಂಟಿ ಭೂಮಿ ಯಾರ‍್ಯಾರು ಕಬಳಿಸಿದ್ದಾರೆ ಎಂಬುದನ್ನು ರಾಜ್ಯ ಸರ್ಕಾರ ತನಿಖೆ ಮಾಡಲು ಸಿದ್ಧವಿದೆಯೇ? ಎಂದು ಸವಾಲು ಹಾಕಿದರು.

ಪ್ರೋಟೊಕಾಲ್‌ ನಂಬಿ ರಾಜಕಾರಣ ಮಾಡಲ್ಲ: ಜನತಾ ದರ್ಶನಕ್ಕೆ ಬಂದ ಸಾವಿರಾರು ಜನರನ್ನು ನಿಯಂತ್ರಿಸಲು ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ಕೊರತೆ ಕಾಡಿತು. ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರವೇ ಸುತ್ತೋಲೆ ಹೊರಡಿಸಿತು. ರಾಜ್ಯ ಸರ್ಕಾರದ ಪ್ರೊಟೋಕಾಲ್‌ ನಂಬಿ ನಾನು ರಾಜಕಾರಣ ಮಾಡುತ್ತಿಲ್ಲ. ನನ್ನನ್ನು ನಿಮ್ಮ ಜಿಲ್ಲೆಗೆ (ರಾಮನಗರ) ಬಂದಾಗ ಯಾವ ರೀತಿ ನಡೆಸಿಕೊಂಡಿದ್ದೀರಿ ಎಂಬುದು ಗೊತ್ತಿದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದರಲ್ಲಿ ಸಂಶಯವೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರ್ಜಿ ಹಿಡಿದುಕೊಂಡು ಬಂದಿರಲಿಲ್ಲವೇ?: ಕರ್ನಾಟಕ ರಾಜ್ಯ ಸರ್ಕಾರದ ಬೇಡಿಕೆಗಳನ್ನು ಕಾರ್ಯರೂಪಕ್ಕೆ ತರಲು ಮುಖ್ಯಮಂತ್ರಿ ಮತ್ತು ಸಚಿವರ ದಂಡು ಮೊನ್ನೆ ದೆಹಲಿಗೆ ಬಂದಿತ್ತು. ಆಗ ಯಾರ ಮುಂದೆ ಅರ್ಜಿ ಹಿಡಿದುಕೊಂಡು ಬಂದಿದ್ದರು? ನಮ್ಮ ಹತ್ತಿರ ಬಂದಿರಲಿಲ್ಲವೇ? ಒಕ್ಕೂಟ ವ್ಯವಸ್ಥೆಯಲ್ಲಿ ಎರಡೂ ಸರ್ಕಾರಗಳಿಗೂ ಜವಾಬ್ದಾರಿ ಇದೆ. ಇದನ್ನು ಅರ್ಥಮಾಡಿಕೊಳ್ಳಲಿ. ಕೇಂದ್ರ ಸಚಿವರಿಗೆ ಯಾವ ರೀತಿ ಭದ್ರತೆ ಕೊಡಬೇಕು ಎಂಬುದು ಈ ರಾಜ್ಯ ಸರ್ಕಾರಕ್ಕೆ ಜ್ಞಾನ ಇದೆಯಾ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

5 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

6 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

8 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

9 hours ago