ಮಂಡ್ಯ

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು.

ಜಲಾನಯನ ಅಭಿವೃದ್ಧಿ ಇಲಾಖೆ, ಕೇಂದ್ರದ ಭೂ ಸಂಪನ್ಮೂಲ ಇಲಾಖೆ, ವಿಶ್ವ ಬ್ಯಾಂಕ್ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ, ಮೂರು ದಿನಗಳ ಜಲಾನಯನ ಸ್ಥಿತಿಸ್ಥಾಪಕತ್ವ, ವಿಜ್ಞಾನ ಸುಸ್ಥಿರತೆ ಮತ್ತುಸಮಾಜವನ್ನು ಸಂಯೋಜಿಸುವ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿಯವರು, ಕಳೆದ ನಾಲ್ಕು ದಶಕಗಳಿಂದ ಜಲಾನಯನ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂದು ಹೇಳಿದರು. ವಿಶ್ವಬ್ಯಾಂಕ್ REWARD ಕಾರ್ಯಕ್ರಮದಡಿ ನಡೆಯುತ್ತಿರುವ LRI ಆಧಾರಿತ ಜಲಾನಯನ ಅಭಿವೃದ್ಧಿಯಿಂದ ರಾಜ್ಯದ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಭೂಸಂಪನ್ಮೂಲ ಇಲಾಖೆ, ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ನಿತಿನ್ ಕಾಡೆ ಮಾತನಾಡಿ, ಯಶಸ್ವಿ ಜಲಾನಯನ ಅಭಿವೃದ್ಧಿಯ ಎರಡುಸ್ತಂಭಗಳು—ತಾಂತ್ರಿಕ ಸಾಮರ್ಥ್ಯ ಮತ್ತು ಬಲವಾದ ಆಡಳಿತ ಎಂದು ಹೇಳಿದರು. REWARD ಕಾರ್ಯಕ್ರಮವು ದೇಶವ್ಯಾಪಿ PMKSY ಕಾರ್ಯಕ್ರಮದಲ್ಲಿ ವಿಸ್ತರಿಸಲು ಅಗತ್ಯವಾದ ತಾಂತ್ರಿಕ ಬಲವನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸಮುದಾಯಗಳು ಮತ್ತು ಸಂಸ್ಥೆಗಳನ್ನು ಬಲಪಡಿಸು ಮೂಲಕ ಅಭಿವೃದ್ಧಿ ಗೆ ಒತ್ತು ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು. ವಿಶ್ವ ಬ್ಯಾಂಕಿನ ಮುಖ್ಯ ಕೃಷಿ ತಜ್ಞ ಆಂಡ್ರೂ ವುಡ್ ಲ್ಯಾಂಡ್ ಮಾತನಾಡಿ, ಕರ್ನಾಟಕದಲ್ಲಿ REWARD ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವುದಕ್ಕೆ ಮೆಚ್ಚಿ, ಇತರ ರಾಜ್ಯಗಳಿಗೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಇಥಿಯೋಪಿಯಾ, ನೈಜೀರಿಯಾ, ಕಾಂಗೋ, ಕೆನಡಾ, ನೈರೋಬಿ, ಪ್ರಾನ್ಸ್, ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.. ಇನ್ನೂ ದೇಶದ 24 ರಾಜ್ಯಗಳ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ನೋಡಲ್ ಎಜೆನ್ಸಿಗಳ ಮುಖ್ಯ ಕಾರ್ಯನಿರ್ವಹಕರು,ಮತ್ತು ನಿರ್ದೇಶಕರು, ಕರ್ನಾಟಕ ಜಲ ಸಂರಕ್ಷಣಾ ಮತ್ತು ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಸುರೇಶ್, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು..

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago