ಮಂಡ್ಯ

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು.

ಜಲಾನಯನ ಅಭಿವೃದ್ಧಿ ಇಲಾಖೆ, ಕೇಂದ್ರದ ಭೂ ಸಂಪನ್ಮೂಲ ಇಲಾಖೆ, ವಿಶ್ವ ಬ್ಯಾಂಕ್ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ, ಮೂರು ದಿನಗಳ ಜಲಾನಯನ ಸ್ಥಿತಿಸ್ಥಾಪಕತ್ವ, ವಿಜ್ಞಾನ ಸುಸ್ಥಿರತೆ ಮತ್ತುಸಮಾಜವನ್ನು ಸಂಯೋಜಿಸುವ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿಯವರು, ಕಳೆದ ನಾಲ್ಕು ದಶಕಗಳಿಂದ ಜಲಾನಯನ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂದು ಹೇಳಿದರು. ವಿಶ್ವಬ್ಯಾಂಕ್ REWARD ಕಾರ್ಯಕ್ರಮದಡಿ ನಡೆಯುತ್ತಿರುವ LRI ಆಧಾರಿತ ಜಲಾನಯನ ಅಭಿವೃದ್ಧಿಯಿಂದ ರಾಜ್ಯದ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಭೂಸಂಪನ್ಮೂಲ ಇಲಾಖೆ, ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ನಿತಿನ್ ಕಾಡೆ ಮಾತನಾಡಿ, ಯಶಸ್ವಿ ಜಲಾನಯನ ಅಭಿವೃದ್ಧಿಯ ಎರಡುಸ್ತಂಭಗಳು—ತಾಂತ್ರಿಕ ಸಾಮರ್ಥ್ಯ ಮತ್ತು ಬಲವಾದ ಆಡಳಿತ ಎಂದು ಹೇಳಿದರು. REWARD ಕಾರ್ಯಕ್ರಮವು ದೇಶವ್ಯಾಪಿ PMKSY ಕಾರ್ಯಕ್ರಮದಲ್ಲಿ ವಿಸ್ತರಿಸಲು ಅಗತ್ಯವಾದ ತಾಂತ್ರಿಕ ಬಲವನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸಮುದಾಯಗಳು ಮತ್ತು ಸಂಸ್ಥೆಗಳನ್ನು ಬಲಪಡಿಸು ಮೂಲಕ ಅಭಿವೃದ್ಧಿ ಗೆ ಒತ್ತು ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು. ವಿಶ್ವ ಬ್ಯಾಂಕಿನ ಮುಖ್ಯ ಕೃಷಿ ತಜ್ಞ ಆಂಡ್ರೂ ವುಡ್ ಲ್ಯಾಂಡ್ ಮಾತನಾಡಿ, ಕರ್ನಾಟಕದಲ್ಲಿ REWARD ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವುದಕ್ಕೆ ಮೆಚ್ಚಿ, ಇತರ ರಾಜ್ಯಗಳಿಗೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಇಥಿಯೋಪಿಯಾ, ನೈಜೀರಿಯಾ, ಕಾಂಗೋ, ಕೆನಡಾ, ನೈರೋಬಿ, ಪ್ರಾನ್ಸ್, ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.. ಇನ್ನೂ ದೇಶದ 24 ರಾಜ್ಯಗಳ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ನೋಡಲ್ ಎಜೆನ್ಸಿಗಳ ಮುಖ್ಯ ಕಾರ್ಯನಿರ್ವಹಕರು,ಮತ್ತು ನಿರ್ದೇಶಕರು, ಕರ್ನಾಟಕ ಜಲ ಸಂರಕ್ಷಣಾ ಮತ್ತು ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಸುರೇಶ್, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು..

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago