ಮಂಡ್ಯ

ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ: ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿ ನಂತರ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ತಕ್ಷಣ ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ‌. ಆದ್ರೆ ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡ್ತಾ ಇದ್ದಾರೆ.

ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ. ಹೊರಗಡೆಯಿಂದ ಬಂದು ಯಾರೋ‌ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡುತ್ತಾ ಇದ್ದೇವೆ. ಯಾವುದೇ ಸಮಾಜ ಇದ್ರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ತೀವಿ. ಬಿಜೆಪಿ, ಜೆಡಿಎಸ್‌ನವರು ರಾಜಕಾರಣವಾಗಿ ನಮ್ಮನ್ನು ಎದುರಿಸಲಾಗದೆ ಪ್ರಚೋದನೆ ಮಾಡ್ತಾ ಇದ್ದಾರೆ. ನಾವು ಯಾರ ಓಲೈಕೆ ಸಹಾ ಮಾಡುತ್ತಿಲ್ಲ. ಹಾಗಿದ್ರೆ ಯಾಕೆ ಇಪ್ಪತ್ತೊಂದು ಜನರನ್ನು ಬಂಧನ ಮಾಡ್ತಾ ಇದ್ದೆವು ಎಂದು ಪ್ರಶ್ನೆ ಮಾಡಿದರು.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಸದನದಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗೋದಿಲ್ಲ. ಹೀಗಾಗಿ ಇವಾಗ ಇಂತಹ ಘಟನೆಗಳು ಆದಾಗ ಪ್ರಚೋದನೆ ಕೊಡುವ ಕೆಲಸ ಮಾಡ್ತಾ ಇದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

5 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

6 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

7 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

8 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

8 hours ago