ಮಂಡ್ಯ

ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ: ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿ ನಂತರ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ತಕ್ಷಣ ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ‌. ಆದ್ರೆ ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡ್ತಾ ಇದ್ದಾರೆ.

ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ. ಹೊರಗಡೆಯಿಂದ ಬಂದು ಯಾರೋ‌ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡುತ್ತಾ ಇದ್ದೇವೆ. ಯಾವುದೇ ಸಮಾಜ ಇದ್ರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ತೀವಿ. ಬಿಜೆಪಿ, ಜೆಡಿಎಸ್‌ನವರು ರಾಜಕಾರಣವಾಗಿ ನಮ್ಮನ್ನು ಎದುರಿಸಲಾಗದೆ ಪ್ರಚೋದನೆ ಮಾಡ್ತಾ ಇದ್ದಾರೆ. ನಾವು ಯಾರ ಓಲೈಕೆ ಸಹಾ ಮಾಡುತ್ತಿಲ್ಲ. ಹಾಗಿದ್ರೆ ಯಾಕೆ ಇಪ್ಪತ್ತೊಂದು ಜನರನ್ನು ಬಂಧನ ಮಾಡ್ತಾ ಇದ್ದೆವು ಎಂದು ಪ್ರಶ್ನೆ ಮಾಡಿದರು.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಸದನದಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗೋದಿಲ್ಲ. ಹೀಗಾಗಿ ಇವಾಗ ಇಂತಹ ಘಟನೆಗಳು ಆದಾಗ ಪ್ರಚೋದನೆ ಕೊಡುವ ಕೆಲಸ ಮಾಡ್ತಾ ಇದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

32 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

38 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

42 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

46 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago