ಮಂಡ್ಯ

ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ: ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿ ನಂತರ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ತಕ್ಷಣ ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ‌. ಆದ್ರೆ ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡ್ತಾ ಇದ್ದಾರೆ.

ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ. ಹೊರಗಡೆಯಿಂದ ಬಂದು ಯಾರೋ‌ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡುತ್ತಾ ಇದ್ದೇವೆ. ಯಾವುದೇ ಸಮಾಜ ಇದ್ರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ತೀವಿ. ಬಿಜೆಪಿ, ಜೆಡಿಎಸ್‌ನವರು ರಾಜಕಾರಣವಾಗಿ ನಮ್ಮನ್ನು ಎದುರಿಸಲಾಗದೆ ಪ್ರಚೋದನೆ ಮಾಡ್ತಾ ಇದ್ದಾರೆ. ನಾವು ಯಾರ ಓಲೈಕೆ ಸಹಾ ಮಾಡುತ್ತಿಲ್ಲ. ಹಾಗಿದ್ರೆ ಯಾಕೆ ಇಪ್ಪತ್ತೊಂದು ಜನರನ್ನು ಬಂಧನ ಮಾಡ್ತಾ ಇದ್ದೆವು ಎಂದು ಪ್ರಶ್ನೆ ಮಾಡಿದರು.

ಇನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಸದನದಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗೋದಿಲ್ಲ. ಹೀಗಾಗಿ ಇವಾಗ ಇಂತಹ ಘಟನೆಗಳು ಆದಾಗ ಪ್ರಚೋದನೆ ಕೊಡುವ ಕೆಲಸ ಮಾಡ್ತಾ ಇದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

15 seconds ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

11 mins ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

34 mins ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

2 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

2 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

3 hours ago