ಮಂಡ್ಯ

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣ : ಮುಸ್ಲಿಂ ಮುಖಂಡರ ವಿರುದ್ಧ ಎಸ್.ಪಿ. ಸ್ವಾಮಿ ದೂರು

ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರು ಮುಸ್ಲಿಂ ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮದ್ದೂರಿನ ಜಾಮಿಯಾ ಮಸೀದಿ ಕಮಿಟಿ ಅಧ್ಯಕ್ಷ ಆದಿಲ್ ಖಾನ್ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರಕರಣ ದಾಖಲು ಮಾಡುವುದಾಗಿ ಭರವಸೆ ನೀಡಿದರು.

ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಽಸಿದಂತೆ ಇತ್ತೀಚೆಗೆ ನಡೆದಿದ್ದ ಪ್ರಗತಿಪರರ ಸಭೆಯಲ್ಲಿ ಹೋರಾಟಕ್ಕೆ ತನು, ಮನ ಧನ ಸಹಾಯ ಮಾಡುತ್ತೇನೆಂದು ಮುಸ್ಲಿಂ ಮುಖಂಡ ಆದಿಲ್ ಖಾನ್ ತಿಳಿಸಿದ್ದರು. ಸಭೆಯಲ್ಲಿ ಹೇಳಿಕೆ ನೀಡಿದ್ದ ವಿಡಿಯೋ ವೈರಲ್ಲಾಗಿದ್ದು, ಈ ಹೇಳಿಕೆ ಕೋಮುಗಲಭೆಗೆ ಎಡೆ ಮಾಡಿಕೊಡುವ ಪ್ರಚೋದನಾಕಾರಿ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಲಾಟೆ ಬಳಿಕ ತಮ್ಮ ಸುಮದಾಯದವರು ಮಾಡಿದ್ದ ತಪ್ಪಿನಿಂದಾಗಿ ಗಲಭೆಗೆ ಕಾರಣವಾಯಿತು ಎಂದು ಆದಿಲ್ ಖಾನ್ ಸಭೆಯಲ್ಲಿ ಕ್ಷಮೆ ಯಾಚಿಸಿದ್ದರು. ನಂತರ ಪ್ರಗತಿಪರರ ಜೊತೆ ಸೇರಿ ಉಲ್ಟಾ ಹೊಡೆದು ಪ್ರತಿಭಟನೆ ಮಾಡಿ ತಮ್ಮ ಸಮುದಾಯದಿಂದ ಆರ್ಥಿಕ ಸಹಾಯ ಮಾಡುತ್ತೇನೆಂದು ಹೇಳಿದ್ದಾರೆ. ಮತೀಯ ಸಂಘರ್ಷಕ್ಕೆ ಕಾರಣವಾದ ಹೇಳಿಕೆ ಕೊಟ್ಟಿರುವ ಆದಿಲ್ ಖಾನ್‌ನನ್ನು ಬಂಽಸಬೇಕು. ಕೋಮು ಗಲಭೆಗೆ ಕಾರಣರಾದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಸಿ.ಕೆ. ಸತೀಶ್, ವಕೀಲರಾದ ಮಲ್ಲೇಶ್, ನೈದಿಲೆಚಂದ್ರು, ಸಂತೋಷ್, ಎಂ.ಸಿ.ಸಿದ್ದು, ಶಂಕರೇಗೌಡ, ರವಿ, ಯೋಗಾನಂದ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

5 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

7 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

8 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

9 hours ago