ಮಂಡ್ಯ

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣ : ಮುಸ್ಲಿಂ ಮುಖಂಡರ ವಿರುದ್ಧ ಎಸ್.ಪಿ. ಸ್ವಾಮಿ ದೂರು

ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರು ಮುಸ್ಲಿಂ ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮದ್ದೂರಿನ ಜಾಮಿಯಾ ಮಸೀದಿ ಕಮಿಟಿ ಅಧ್ಯಕ್ಷ ಆದಿಲ್ ಖಾನ್ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರಕರಣ ದಾಖಲು ಮಾಡುವುದಾಗಿ ಭರವಸೆ ನೀಡಿದರು.

ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಽಸಿದಂತೆ ಇತ್ತೀಚೆಗೆ ನಡೆದಿದ್ದ ಪ್ರಗತಿಪರರ ಸಭೆಯಲ್ಲಿ ಹೋರಾಟಕ್ಕೆ ತನು, ಮನ ಧನ ಸಹಾಯ ಮಾಡುತ್ತೇನೆಂದು ಮುಸ್ಲಿಂ ಮುಖಂಡ ಆದಿಲ್ ಖಾನ್ ತಿಳಿಸಿದ್ದರು. ಸಭೆಯಲ್ಲಿ ಹೇಳಿಕೆ ನೀಡಿದ್ದ ವಿಡಿಯೋ ವೈರಲ್ಲಾಗಿದ್ದು, ಈ ಹೇಳಿಕೆ ಕೋಮುಗಲಭೆಗೆ ಎಡೆ ಮಾಡಿಕೊಡುವ ಪ್ರಚೋದನಾಕಾರಿ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಲಾಟೆ ಬಳಿಕ ತಮ್ಮ ಸುಮದಾಯದವರು ಮಾಡಿದ್ದ ತಪ್ಪಿನಿಂದಾಗಿ ಗಲಭೆಗೆ ಕಾರಣವಾಯಿತು ಎಂದು ಆದಿಲ್ ಖಾನ್ ಸಭೆಯಲ್ಲಿ ಕ್ಷಮೆ ಯಾಚಿಸಿದ್ದರು. ನಂತರ ಪ್ರಗತಿಪರರ ಜೊತೆ ಸೇರಿ ಉಲ್ಟಾ ಹೊಡೆದು ಪ್ರತಿಭಟನೆ ಮಾಡಿ ತಮ್ಮ ಸಮುದಾಯದಿಂದ ಆರ್ಥಿಕ ಸಹಾಯ ಮಾಡುತ್ತೇನೆಂದು ಹೇಳಿದ್ದಾರೆ. ಮತೀಯ ಸಂಘರ್ಷಕ್ಕೆ ಕಾರಣವಾದ ಹೇಳಿಕೆ ಕೊಟ್ಟಿರುವ ಆದಿಲ್ ಖಾನ್‌ನನ್ನು ಬಂಽಸಬೇಕು. ಕೋಮು ಗಲಭೆಗೆ ಕಾರಣರಾದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಸಿ.ಕೆ. ಸತೀಶ್, ವಕೀಲರಾದ ಮಲ್ಲೇಶ್, ನೈದಿಲೆಚಂದ್ರು, ಸಂತೋಷ್, ಎಂ.ಸಿ.ಸಿದ್ದು, ಶಂಕರೇಗೌಡ, ರವಿ, ಯೋಗಾನಂದ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago