ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಲು ಹೆಣ್ಣು ಸಿಗದೆ ಹತಾಶೆಗೊಳಗಾಗ ಯುವಕರು ಗ್ರಾಮದಲ್ಲಿ ಮಠ ಕಟ್ಟಿಸಿಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ.
ಇದನ್ನು ಓದಿ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ
ಗ್ರಾಮದಲ್ಲಿ ಮದುವೆಯಾಗದ 30ಕ್ಕೂ ಹೆಚ್ಚು ಯುವಕರು ತಮ್ಮೂರಿನ ಪಂಚಾಯ್ತಿಯ ಗ್ರಾಮಸಭೆಗೆ ಬೇಡಿಕೆ ಪತ್ರ ಬರೆದಿದ್ದಾರೆ.
ಪ್ರಸನ್ನ ಎಂಬ ಯುವಕನ ನೇತೃತ್ವದಲ್ಲಿ ಪಂಚಾಯ್ತಿಗೆ ಅರ್ಜಿ ಬರೆದು ಮಠಕ್ಕೆ ಮನವಿ ಸಲ್ಲಿಸಲಾಗಿದ್ದು, ಅವಿವಾಹಿತ ಯುವಕರ ಈ ವಿಚಿತ್ರ ಅರ್ಜಿಯನ್ನು ಕಂಡು ಸದಸ್ಯರು ಹಾಗು ಅಧಿಕಾರಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ಈ ಮನವಿಯನ್ನು ತಹಶೀಲ್ದಾರ್ ಗಮನಕ್ಕೆ ತರುವುದಾಗಿ ಪಂಚಾಯಿತಿ ಪಿಡಿಓ ತಿಳಿಸಿದ್ದಾರೆ.
ಇನ್ನು ತಮ್ಮೂರಿನ ಗಂಡು ಮಕ್ಕಳ ಹತಾಶೆ ಸ್ಥಿತಿಗೆ ಕಂಗಾಲಾಗಿರುವ ಮಕ್ಕಳ ಪೋಷಕರು, ರೈತ ಕುಟುಂಬದ ಗಂಡು ಮಕ್ಕಳಿಗೆ ಹೆಣ್ಣು ಕೊಡದ ಸ್ಥಿತಿಗೆ ಬಂದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…