ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಲು ಹೆಣ್ಣು ಸಿಗದೆ ಹತಾಶೆಗೊಳಗಾಗ ಯುವಕರು ಗ್ರಾಮದಲ್ಲಿ ಮಠ ಕಟ್ಟಿಸಿಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ.
ಇದನ್ನು ಓದಿ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ
ಗ್ರಾಮದಲ್ಲಿ ಮದುವೆಯಾಗದ 30ಕ್ಕೂ ಹೆಚ್ಚು ಯುವಕರು ತಮ್ಮೂರಿನ ಪಂಚಾಯ್ತಿಯ ಗ್ರಾಮಸಭೆಗೆ ಬೇಡಿಕೆ ಪತ್ರ ಬರೆದಿದ್ದಾರೆ.
ಪ್ರಸನ್ನ ಎಂಬ ಯುವಕನ ನೇತೃತ್ವದಲ್ಲಿ ಪಂಚಾಯ್ತಿಗೆ ಅರ್ಜಿ ಬರೆದು ಮಠಕ್ಕೆ ಮನವಿ ಸಲ್ಲಿಸಲಾಗಿದ್ದು, ಅವಿವಾಹಿತ ಯುವಕರ ಈ ವಿಚಿತ್ರ ಅರ್ಜಿಯನ್ನು ಕಂಡು ಸದಸ್ಯರು ಹಾಗು ಅಧಿಕಾರಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ಈ ಮನವಿಯನ್ನು ತಹಶೀಲ್ದಾರ್ ಗಮನಕ್ಕೆ ತರುವುದಾಗಿ ಪಂಚಾಯಿತಿ ಪಿಡಿಓ ತಿಳಿಸಿದ್ದಾರೆ.
ಇನ್ನು ತಮ್ಮೂರಿನ ಗಂಡು ಮಕ್ಕಳ ಹತಾಶೆ ಸ್ಥಿತಿಗೆ ಕಂಗಾಲಾಗಿರುವ ಮಕ್ಕಳ ಪೋಷಕರು, ರೈತ ಕುಟುಂಬದ ಗಂಡು ಮಕ್ಕಳಿಗೆ ಹೆಣ್ಣು ಕೊಡದ ಸ್ಥಿತಿಗೆ ಬಂದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…