ಮಂಡ್ಯ

ಕಳಪೆ ಬಿತ್ತನೆ ಬೀಜ-ರಸಗೊಬ್ಬರ ಮಾರಾಟ ಕಂಡು ಬಂದರೆ ಕಠಿಣ ಕ್ರಮ: ವಿ.ಅನ್ಬು ಕುಮಾರ್

ಮಂಡ್ಯ: ಜಿಲ್ಲೆಯಲ್ಲಿ ಕಳಪೆ ಅಥವಾ ಕಲಬೆರೆಕೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಗುರವಾರ(ಜು.11) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಿತ್ತನೆ ಬೀಜದ ಮೊಳಕೆ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು. ಇದರಿಂದ ಮುಂದಾಗುವ ತೊಂದರೆಯನ್ನು ತಡೆಗಟ್ಟಬಹುದು ಎಂದರು.

ಮನೆ ಹಾನಿ ಪ್ರಕರಣಗಳು ಒಂದು ವಾರದೊಳಗೆ ವಿಲೇಯಾಗಬೇಕು. ಪ್ರಕೃತಿ ವಿಕೋಪದಿಂದ ಬಡವರ ಮನೆ ಹಾನಿಯಾದ ಸಂದರ್ಭದಲ್ಲಿ ಶೀಘ್ರವೇ ರಿಪೇರಿ ಅಥವಾ ಮನೆ ಕಟ್ಟಿಕೊಳ್ಳಲು ಅನುಕೂಲವಗುವಂತೆ ಪರಿಹಾರ ಒದಗಿಸುವ ಕೆಲಸವನ್ನು ಸರಳೀಕರಣಗೊಳಿಸಲಾಗಿದೆ. ಸಣ್ಣ ಪುಟ್ಟ ಮನೆ ಹಾನಿಯಾದಾಗ ಎರಡು ಅಥವಾ ಮೂರು ದಿನಗಳಲ್ಲಿ ಪರಿಶೀಲನೆ ನಡೆಸಿ ಪರಿಹಾರ ಒದಗಿಸಿ ಎಂದು ನಿರ್ದೇಶಿಸಿದರು.

ಕುಡಿಯುವ ನೀರು ಗಂಭೀರ ವಿಷಯವಾಗಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಪರೀಕ್ಷೆ ನಿಗದಿತವಾಗಿ ನಡೆಯಬೇಕು. ಪರೀಕ್ಷೆ ನಡೆಸಿರುವ ಬಗ್ಗೆ ವರದಿಯನ್ನು ಪಡೆದುಕೊಂಡು ಪರಿಶೀಲಿಸಬೇಕು. ಕಲುಷಿತ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ಶಿಕ್ಷಣ ಇಲಾಖೆಯಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ, ವಿದ್ಯಾರ್ಥಿಗಳು ಮಾಹೆವಾರು ನಡೆಸುವ ಪರೀಕ್ಷೆಯ ವರದಿಯನ್ನು ಗಣಕೀಕರಣ ಮಾಡಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ಮಾಹೆ ಪರಿಶೀಲನೆ ನಡೆಸಬೇಕು, ಆಗ ಮಾತ್ರ ಎಸ್.ಎಸ್.ಎಲ್ ಸಿ ಪರೀಕ್ಷೆ ಫಲಿತಾಂಶ ಉತ್ತಮಗೊಳಿಸಲು ಸಾಧ್ಯ ಎಂದು ಹೇಳಿದರು.

ಬಾಲ್ಯ ವಿವಾಹ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟಲು ಗುಪ್ತಚರ ಕೆಲಸಗಳನ್ನು ಹೆಚ್ಚುಗೊಳಿಸಬೇಕು. ಕಂದಾಯ, ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆಗಳು ಅಂತರಿಕವಾಗಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಮಾಹಿತಿಗಳನ್ನು ಕಲೆಹಾಕಿ, ಬಾಲ್ಯ ವಿವಾಹ ಹಾಗೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.

ಡೆಂಘಿ ರೋಗಿಗಳಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಯಲ್ಲಿ ಮಾಡಿಕೊಂಡಿರುವ ಬೆಡ್ ವ್ಯವಸ್ಥೆ, ಔಷಧಗಳ ದಾಸ್ತಾನು ಕುರಿತು ಮಾಹಿತಿ ಪಡೆದುಕೊಂಡರು.

ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಮಳೆಯ ಪ್ರಮಾಣ, ಜಲಾಶಯದಲ್ಲಿ ನೀರಿನ ಪ್ರಮಾಣ, ಬೆಳೆ ಹಾನಿ, ಮನೆ ಹಾನಿ, ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಪ್ರಕರಣಗಳು, ಎನ್.ಹೆಚ್. ರಸ್ತೆಗಳು ಸೇರಿದಂತೆ ಜಿಲ್ಲೆಯ ಮಾಹಿತಿಯನ್ನು ಸಭೆಗೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು, ನರೇಗಾ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ, ಜೆ.ಜೆ.ಎಂ, ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮಾಹಿತಿಯನ್ನು ಸಭೆಗೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago