ಮಂಡ್ಯ

ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿದರೆ ಕಠಿಣ ಕಾನೂನು ಕ್ರಮ

ಮಂಡ್ಯ : ದಲಿತರರಿಗೆ ದೇವಾಲಯದಲ್ಲಿ ಪೂಜೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಂತಿ ಸಭೆ ನಡೆಸಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಿ ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ಸೂಚಿಸಿದ ಘಟನೆ ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ದಲಿತರಿಗೆ ಪೂಜೆ ಮಾಡಲು ನಿರಾಕರಿಸಿದಲ್ಲದೆ, ದೇವಸ್ಥಾನಕ್ಕೆ ಪ್ರವೇಶಕ್ಕೂ ಅವಕಾಶ ನೀಡದ ಘಟನೆ ಸೋಮವಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀ ನಾಗಲಕ್ಷ್ಮಿ , ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆನಂದ್ ,ಹಾಗೂ ಕಂದಾಯ ನಿರೀಕ್ಷಕರಾದ ಮಹೇಶ್ ರವರ ನೇತೃತ್ವದಲ್ಲಿ ದಲಿತ ಹಾಗೂ ಸರ್ವಣಿಯರ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಿ ದಲಿತರನ್ನು ದೇವಸ್ಥಾನಕ್ಕೆ ಪ್ರವೇಶ ಮಾಡಿ, ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.

ಈ ವೇಳೆ ಮಾತನಾಡಿದ ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂದ್ ಮಾತನಾಡಿ ಗ್ರಾಮದಲ್ಲಿ ಶ್ರೀ ಶಂಭುಲಿಂಗೇಶ್ವರ, ಭೈರವೇಶ್ವರ ಕೊಂಡೋತ್ಸವದ ಸಂದರ್ಭದಲ್ಲಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ಮಾಡಲು ಹಾಗೂ ಪೂಜೆ ಮಾಡಲು ನಿರಾಕರಿಸಿದ ಘಟನೆಯೂ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಸಂವಿಧಾನದ ಆಶಯದಂತೆ ದಲಿತರು ಮುಕ್ತವಾಗಿ ದೇವಸ್ಥಾನವನ್ನು ಪ್ರವೇಶ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದರು ಕೂಡ ಗ್ರಾಮದಲ್ಲಿ ಕೆಲ ಕಟ್ಟುಪಾಡುಗಳಿಗೆ ಒಳಗಾಗಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಲು ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸದೆ ಇರುವುದು ಕಾನೂನು ಬಾಹಿರವಾಗಿದೆ ಎಂದರು.

ಗ್ರಾಮದಲ್ಲಿ ಸರ್ವ ಸಮುದಾಯಗಳು ಒಗ್ಗಟ್ಟಿನಿಂದ ಒಗ್ಗೂಡಿ ಹಬ್ಬ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಆಚರಣೆಗಳನ್ನು ಮಾಡಬೇಕು, ಕಾನೂನಿಗೆ ಗೌರವ ಸಲ್ಲಿಸಬೇಕು, ಅಲ್ಲದೆ ಗ್ರಾಮದಲ್ಲಿ ಈ ರೀತಿ ಘಟನೆಗಳನ್ನು ಸಂಭವಿಸಿದರೆ ಅಂತಹವರ ವಿರುದ್ಧ ಕಠಿಣ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಚಿದಂಬರ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ಶ್ರೀನಿವಾಸ, ಗ್ರಾಮದ ಮುಖಂಡರಾದ ಶಿವಲಿಂಗಯ್ಯ, ಚಿಕ್ಕಸ್ವಾಮಿ, ಜಾನಪದ ಕಲಾವಿದ ಸುಂದರೇಶ್, ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ನಾಡಗೌಡರಾದ ಕುಳ್ಳೆಗೌಡ, ಶಿವಲಿಂಗೇಗೌಡ, ಗೂಳಿಗೌಡ ಗ್ರಾಮ ಲೆಕ್ಕಿಗ ಅಕ್ಷಯ್ ಕೀರ್ತಿ, ಪೊಲೀಸ್ ಪೇದೆ ಶ್ರೀಧರ್ ರಾವ್ ಉಪಸ್ಥಿತರಿದ್ದರು.

lokesh

Recent Posts

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

15 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

24 mins ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

2 hours ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

2 hours ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

3 hours ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

4 hours ago