ಮಂಡ್ಯ

ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿದರೆ ಕಠಿಣ ಕಾನೂನು ಕ್ರಮ

ಮಂಡ್ಯ : ದಲಿತರರಿಗೆ ದೇವಾಲಯದಲ್ಲಿ ಪೂಜೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಂತಿ ಸಭೆ ನಡೆಸಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಿ ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ಸೂಚಿಸಿದ ಘಟನೆ ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ದಲಿತರಿಗೆ ಪೂಜೆ ಮಾಡಲು ನಿರಾಕರಿಸಿದಲ್ಲದೆ, ದೇವಸ್ಥಾನಕ್ಕೆ ಪ್ರವೇಶಕ್ಕೂ ಅವಕಾಶ ನೀಡದ ಘಟನೆ ಸೋಮವಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀ ನಾಗಲಕ್ಷ್ಮಿ , ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆನಂದ್ ,ಹಾಗೂ ಕಂದಾಯ ನಿರೀಕ್ಷಕರಾದ ಮಹೇಶ್ ರವರ ನೇತೃತ್ವದಲ್ಲಿ ದಲಿತ ಹಾಗೂ ಸರ್ವಣಿಯರ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಿ ದಲಿತರನ್ನು ದೇವಸ್ಥಾನಕ್ಕೆ ಪ್ರವೇಶ ಮಾಡಿ, ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.

ಈ ವೇಳೆ ಮಾತನಾಡಿದ ಕೆ.ಎಂ ದೊಡ್ಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂದ್ ಮಾತನಾಡಿ ಗ್ರಾಮದಲ್ಲಿ ಶ್ರೀ ಶಂಭುಲಿಂಗೇಶ್ವರ, ಭೈರವೇಶ್ವರ ಕೊಂಡೋತ್ಸವದ ಸಂದರ್ಭದಲ್ಲಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ಮಾಡಲು ಹಾಗೂ ಪೂಜೆ ಮಾಡಲು ನಿರಾಕರಿಸಿದ ಘಟನೆಯೂ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಸಂವಿಧಾನದ ಆಶಯದಂತೆ ದಲಿತರು ಮುಕ್ತವಾಗಿ ದೇವಸ್ಥಾನವನ್ನು ಪ್ರವೇಶ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದರು ಕೂಡ ಗ್ರಾಮದಲ್ಲಿ ಕೆಲ ಕಟ್ಟುಪಾಡುಗಳಿಗೆ ಒಳಗಾಗಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಲು ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸದೆ ಇರುವುದು ಕಾನೂನು ಬಾಹಿರವಾಗಿದೆ ಎಂದರು.

ಗ್ರಾಮದಲ್ಲಿ ಸರ್ವ ಸಮುದಾಯಗಳು ಒಗ್ಗಟ್ಟಿನಿಂದ ಒಗ್ಗೂಡಿ ಹಬ್ಬ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಆಚರಣೆಗಳನ್ನು ಮಾಡಬೇಕು, ಕಾನೂನಿಗೆ ಗೌರವ ಸಲ್ಲಿಸಬೇಕು, ಅಲ್ಲದೆ ಗ್ರಾಮದಲ್ಲಿ ಈ ರೀತಿ ಘಟನೆಗಳನ್ನು ಸಂಭವಿಸಿದರೆ ಅಂತಹವರ ವಿರುದ್ಧ ಕಠಿಣ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಚಿದಂಬರ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ಶ್ರೀನಿವಾಸ, ಗ್ರಾಮದ ಮುಖಂಡರಾದ ಶಿವಲಿಂಗಯ್ಯ, ಚಿಕ್ಕಸ್ವಾಮಿ, ಜಾನಪದ ಕಲಾವಿದ ಸುಂದರೇಶ್, ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ನಾಡಗೌಡರಾದ ಕುಳ್ಳೆಗೌಡ, ಶಿವಲಿಂಗೇಗೌಡ, ಗೂಳಿಗೌಡ ಗ್ರಾಮ ಲೆಕ್ಕಿಗ ಅಕ್ಷಯ್ ಕೀರ್ತಿ, ಪೊಲೀಸ್ ಪೇದೆ ಶ್ರೀಧರ್ ರಾವ್ ಉಪಸ್ಥಿತರಿದ್ದರು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago