strike
ಮಂಡ್ಯ: ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 27ರಂದು ಅರ್ನಿಧಿಷ್ಟ ಕಾಲ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಈಗಾಗಲೇ ಹಲವು ಪ್ರತಿಭಟನಾ ಹೋರಾಟಗಳನ್ನು ನಡೆಸಿ, ಇಲಾಖೆಯ ಅಧಿಕಾರಿಗಳನ್ನು, ಸಚಿವರನ್ನು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರೂ ಯಾವುದೇ ಕ್ರಮವಹಿಸಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕೆಜಿಐಪಿ ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸುವುದು, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕಿಲ್ ನೌಕರರನ್ನು ಖಾಲಿ ಇರುವ ಹುದ್ದೆಗಳಿಗೆ ವಿಲೀನ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಲಾಗಿದೆ ಎಂದು ಹೇಳಿದರು.
ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಮೇ 3 ರಂದು ಮಂಡ್ಯ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಗುವುದು, 15 ದಿನಗಳ ಒಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ನೌಕರ ಸಿಬ್ಬಂದಿ ಕೆಲಸ ಮಾಡುವುದನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.
ಓದಲು ಆ ಪತ್ರಿಕೆ ಸಿಗದಿದ್ದರೆ ಇ-ಪತ್ರಿಕೆ ಓದಿ
ಸುದ್ದಿಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಶಾಖೆಯ ಅಧ್ಯಕ್ಷ ಮಹದೇವು, ಗೌರವ ಅಧ್ಯಕ್ಷ ನಂಜುಂಡ, ಉಪಾಧ್ಯಕ್ಷ ಚಂದ್ರ, ಸೋಮಸುಂದರ್, ಹರೀಶ್, ಲಿಂಗಮಯಿ ಇದ್ದರು.
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…