ಮಂಡ್ಯ

ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೇ 27 ರಂದು ಮುಷ್ಕರ

ಮಂಡ್ಯ: ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 27ರಂದು ಅರ್ನಿಧಿಷ್ಟ ಕಾಲ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಈಗಾಗಲೇ ಹಲವು ಪ್ರತಿಭಟನಾ ಹೋರಾಟಗಳನ್ನು ನಡೆಸಿ, ಇಲಾಖೆಯ ಅಧಿಕಾರಿಗಳನ್ನು, ಸಚಿವರನ್ನು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರೂ ಯಾವುದೇ ಕ್ರಮವಹಿಸಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕೆಜಿಐಪಿ ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸುವುದು, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕಿಲ್ ನೌಕರರನ್ನು ಖಾಲಿ ಇರುವ ಹುದ್ದೆಗಳಿಗೆ ವಿಲೀನ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಲಾಗಿದೆ ಎಂದು ಹೇಳಿದರು.

ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಮೇ 3 ರಂದು ಮಂಡ್ಯ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಗುವುದು, 15 ದಿನಗಳ ಒಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ನೌಕರ ಸಿಬ್ಬಂದಿ ಕೆಲಸ ಮಾಡುವುದನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.

ಓದಲು ಆ ಪತ್ರಿಕೆ ಸಿಗದಿದ್ದರೆ ಇ-ಪತ್ರಿಕೆ ಓದಿ

ಸುದ್ದಿಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಶಾಖೆಯ ಅಧ್ಯಕ್ಷ ಮಹದೇವು, ಗೌರವ ಅಧ್ಯಕ್ಷ ನಂಜುಂಡ, ಉಪಾಧ್ಯಕ್ಷ ಚಂದ್ರ, ಸೋಮಸುಂದರ್, ಹರೀಶ್, ಲಿಂಗಮಯಿ ಇದ್ದರು.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

39 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

52 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

54 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

56 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

58 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

1 hour ago