ಮಂಡ್ಯ

ಸಾಹಿತ್ಯ ಸಮ್ಮೇಳನ ಯಶಸ್ವಿ : ಜನಪ್ರತಿನಿಧಿ, ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ

ಜ.26 ರಂದು ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ

ಮಂಡ್ಯ:  ಜಿಲ್ಲಾ ನಾಗರಿಕ ಅಭಿನಂದನಾ ಸಮಿತಿ ಹಾಗೂ  ನೆಲೆಯೋಗಿ ಸಮಾಜಸೇವಾ ಟ್ರಸ್ಟ್ (ರಿ) ಇವರ ಸಂಯುಕ್ತಾಶ್ರಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಜನವರಿ 26 ಸಂಜೆ 6 ಗಂಟೆಗೆ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ನಾಡೋಜ ಡಾ.ಗೊ.ರು. ಚನ್ನಬಸಪ್ಪ ನವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅಭಿನಂದಿಸಲಿದ್ದಾರೆ.

ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ, ಸ್ವಾಗತ ಸಮಿತಿ ಅಭಿನಂದಿತರು,

ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ, ವಿಧಾನಸಭಾ ಶಾಸಕರುಗಳಾದ ಪಿ.ಎಂ ನರೇಂದ್ರಸ್ವಾಮಿ, ಎಂ.ಬಿ. ರಮೇಶ್ ಬಂಡಿಸಿದ್ದೇಗೌಡ, ಪಿ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್ .ಟಿ ಮಂಜು, ಕೆ.ಎಂ. ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಚಾಲಕರಾದ ಡಾ.ಮೀರಾ ಶಿವಲಿಂಗಯ್ಯ ರವರಿಗೆ ಅಭಿನಂದಿಸಲಾಗುವುದು.

ಖ್ಯಾತ ಗಾಯಕರುಗಳಾದ ಹೇಮಂತ್ ಶಮಿತಾ ಮಲ್ನಾಡ್ ಮತ್ತು ಹರ್ಷ ತಂಡದಿಂದ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

1 hour ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

1 hour ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

1 hour ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

1 hour ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

1 hour ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

1 hour ago