ಮಂಡ್ಯ

ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ

ಮಂಡ್ಯ.ನ: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಷುಗರ್ ಕಾರ್ಖಾನೆಯ ಬಾಯ್ಲರ್ ಹೌಸ್ ನಿರ್ಮಾಣದ ಕುರಿತು ಡಿ.ಪಿ.ಆರ್ ಕಳುಹಿಸಲಾಗಿದೆ. ಶೀಘ್ರವಾಗಿ ಮೈಷುಗರ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಥಾಪನೆ ಮಾಡಲಾಗುವುದು ಎಂದರು.

ಸಿ.ಡಿ.ಎಸ್ ನಾಲೆ ಸುಮಾರು 400 ವರ್ಷಗಳ ಹಳೆಯ ನಾಲೆಯಾಗಿದೆ, ಪ್ರಸ್ತುತ ಸಿ.ಡಿ.ಎಸ್ ನಾಲೆಯ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ರೈತರು ಸಹಕರಿಸಬೇಕು, ಶ್ರೀರಂಗಪಟ್ಟಣದಲ್ಲಿ ಸಿ.ಡಿ.ಎಸ್ ನಾಲೆ ಒಡೆದು ರೈತರಿಗೆ ಉಂಟಾಗಿದ್ದ ಬೆಳೆ ಹಾನಿ ಕುರಿತಾಗಿ ಸಮೀಕ್ಷೆ ಮಾಡಲಾಗಿದ್ದು ಪರಿಹಾರದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಪರಿಹಾರದ ಹಣ ನೇರವಾಗಿ ಜಮೆಯಾಗುತ್ತದೆ ಎಂದು ಹೇಳಿದರು.

ಬ್ಯಾಂಕ್‌ಗಳು ರೈತರಿಗೆ ಸರ್ಕಾರ ನೀಡುವ ಪರಿಹಾರದ ಹಣ ಹಾಗೂ ಗೌರವಧನವನ್ನು ಬ್ಯಾಂಕುಗಳು ಸಾಲಕ್ಕೆ ಮನ್ನ ಮಾಡಿಕೊಳ್ಳುವಂತಿಲ್ಲ, ನಾವು ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಏನನ್ನು ಮಾಡುವಂತಿಲ್ಲ. ರೈತರು ಬ್ಯಾಂಕ್‌ಗಳಲ್ಲಿ ತಮಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಕೊಡಿ ಆರ್‌ಬಿಐ ನಿಯಮಗಳ ಸಡಿಲೀಕರಣಕ್ಕೆ ಶಿಫಾರಸ್ಸು ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.

ರೈತರಿಗೆ ಬಾಧಿಸುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ಈಗಾಗಲೇ ಎರಡು ಸಭೆ ನಡೆಸಿ ಸೂಚನೆ ನೀಡಲಾಗಿದೆ, ಮೈಕ್ರೋ ಫೈನಾನ್ಸ್‌ಗಳು ಜಿಲ್ಲಾಡಳಿತದ ಸೂಚನೆಯಂತೆ ಕಾರ್ಯ ನಿರ್ವಹಿಸುತ್ತಿರುವ ಕುರಿತು ಪರೀಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನು ಓದಿ: ಆರನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ

ಕೆಆರ್‌ಎಸ್ 20 ಕಿ‌.ಮೀ ವ್ಯಾಪ್ತಿಯಲ್ಲಿ ಬ್ಲಾಸ್ಟಿಂಗ್ ಮಾಡಲು ಅವಕಾಶ ಕೊಟ್ಟಿಲ್ಲ, ಸದರಿ ವ್ಯಾಪ್ತಿಯಲ್ಲಿ ಯಾರೆ ಬ್ಲಾಸ್ಟಿಂಗ್ ಮಾಡುತ್ತಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಜಿಲ್ಲೆಯಲ್ಲಿ ಯಾರೆ ಅಕ್ರಮವಾಗಿ ಗಣಿಗಾರಿಕೆ ಮಾಡಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ತಾತ್ಕಾಲಿಕ ಭತ್ತ ರಾಗಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ಶಾಶ್ವತವಾಗಿ ನೋಂದಣಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಪ್ರಸ್ತುತ ರಾಗಿ ಕೊಡಲು ರೈತರು ಮುಂದಾಗಿದ್ದಾರೆ ಭತ್ತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೊಂದಣಿ ಆಗಿಲ್ಲ, ನೊಂದಣಿಗೆ ಇನ್ನೂ ದಿನಗಳು ಬಾಕಿ ಇರುವುದರಿಂದ ರೈತರು ಭತ್ತಕ್ಕೆ ನೋಂದಣಿ ಮಾಡಿಕೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಸಭೆಯಲ್ಲಿ ಮೈಷುಗರ್ ಅಧ್ಯಕ್ಷ ಸಿ.ಡಿ ಗಂಗಾಧರ್, ಕಾವೇರಿ ನೀರಾವರಿ ನಿಗಮದ ರಘುರಾಮ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪುಷ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣ್ ಕುಮಾರ್, ರೈತ ಮುಖಂಡರುಗಳಾದ ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಮಂಜೇಶ್ ಗೌಡ, ಸಿ ಕುಮಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

2 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

2 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

2 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

2 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

2 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

2 hours ago