ಮಂಡ್ಯ

ಕಬ್ಬಿನ ಲಾರಿಗೆ ತಗುಲಿದ ವಿದ್ಯುತ್ : ಇಬ್ಬರ ಸಾವು

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ ರಸ್ತೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಘಟನೆಯಲ್ಲಿ ಮಳವಳ್ಳಿ ತಾಲ್ಲೂಕಿನ ಹಂಗ್ರಾಪುರ ಗ್ರಾಮದ ಚಾಲಕ ಮಹದೇವಸ್ವಾಮಿ @ ಚಿನ್ನಸ್ವಾಮಿ (35), ಪ್ರಕಾಶ್(45) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಶನಿವಾರ ಮುಂಜಾನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದಿಂದ ಗುಂಡಾಲ್ ಜಲಾಶಯದ ಸಮೀಪದ ರಸ್ತೆಯಲ್ಲಿ ಕಬ್ಬು ತುಂಬಿಕೊಂಡು ಬರುವಾಗ  ಜೋತುಬಿದ್ದ ವಿದ್ಯುತ್ ತಂತಿ ತಗುಲಿದ ಕಾರಣ ಈ ಘಟನೆ ನಡೆದಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಕೊಳ್ಳೆಗಾಲ ಗ್ರಾಮಾಂತರ ಪೋಲಿಸರು ಹಾಗೂ ಸೆಸ್ಕಾಂ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜೋತುಬಿದ್ದ ವಿದ್ಯುತ್ ಲೇನ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ಸಾರ್ವಜನಿಕರು ಸೆಸ್ಕ್ ಅಧಿಕಾರಿಗಳ ನಿರ್ಲಕ್ಷತೆಯ ಬಗ್ಗೆ  ಕಿಡಿಕಾರಿದ್ದಾರೆ.
ಕುಟುಂಬಸ್ಥರ ಅಕ್ರಂಧನ : ಕುಟುಂಬಕ್ಕೆ ಅಧಾರ ಸ್ಥಂಭವಾಗಿದ್ದ ಈ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಹೇಳತೀರದಾಗಿದೆ. ಸ್ಥಳಕ್ಕೆ ಹಂಗ್ರಾಪುರ ಗ್ರಾಮದ ಮುಖಂಡರು ತೆರಳಿ ಶವಗಳನ್ನು ಸ್ವಗ್ರಾಮಕ್ಕೆ ತರಲು ಕ್ರಮವಹಿಸಿದ್ದಾರೆ. ಈ ಘಟನೆಯಿಂದ ಹಂಗ್ರಾಪುರ ಗ್ರಾಮ ಶೋಕಸಾಗರದಲ್ಲಿ ಮುಳುಗಿದೆ.
lokesh

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

38 mins ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

40 mins ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

43 mins ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

4 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

4 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago