ಮಂಡ್ಯ

ಕಬ್ಬಿನ ಲಾರಿಗೆ ತಗುಲಿದ ವಿದ್ಯುತ್ : ಇಬ್ಬರ ಸಾವು

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ ರಸ್ತೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಘಟನೆಯಲ್ಲಿ ಮಳವಳ್ಳಿ ತಾಲ್ಲೂಕಿನ ಹಂಗ್ರಾಪುರ ಗ್ರಾಮದ ಚಾಲಕ ಮಹದೇವಸ್ವಾಮಿ @ ಚಿನ್ನಸ್ವಾಮಿ (35), ಪ್ರಕಾಶ್(45) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಶನಿವಾರ ಮುಂಜಾನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದಿಂದ ಗುಂಡಾಲ್ ಜಲಾಶಯದ ಸಮೀಪದ ರಸ್ತೆಯಲ್ಲಿ ಕಬ್ಬು ತುಂಬಿಕೊಂಡು ಬರುವಾಗ  ಜೋತುಬಿದ್ದ ವಿದ್ಯುತ್ ತಂತಿ ತಗುಲಿದ ಕಾರಣ ಈ ಘಟನೆ ನಡೆದಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಕೊಳ್ಳೆಗಾಲ ಗ್ರಾಮಾಂತರ ಪೋಲಿಸರು ಹಾಗೂ ಸೆಸ್ಕಾಂ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜೋತುಬಿದ್ದ ವಿದ್ಯುತ್ ಲೇನ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ಸಾರ್ವಜನಿಕರು ಸೆಸ್ಕ್ ಅಧಿಕಾರಿಗಳ ನಿರ್ಲಕ್ಷತೆಯ ಬಗ್ಗೆ  ಕಿಡಿಕಾರಿದ್ದಾರೆ.
ಕುಟುಂಬಸ್ಥರ ಅಕ್ರಂಧನ : ಕುಟುಂಬಕ್ಕೆ ಅಧಾರ ಸ್ಥಂಭವಾಗಿದ್ದ ಈ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಹೇಳತೀರದಾಗಿದೆ. ಸ್ಥಳಕ್ಕೆ ಹಂಗ್ರಾಪುರ ಗ್ರಾಮದ ಮುಖಂಡರು ತೆರಳಿ ಶವಗಳನ್ನು ಸ್ವಗ್ರಾಮಕ್ಕೆ ತರಲು ಕ್ರಮವಹಿಸಿದ್ದಾರೆ. ಈ ಘಟನೆಯಿಂದ ಹಂಗ್ರಾಪುರ ಗ್ರಾಮ ಶೋಕಸಾಗರದಲ್ಲಿ ಮುಳುಗಿದೆ.
lokesh

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

8 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

8 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

9 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

9 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

10 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

11 hours ago