ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ಪರಿಹರಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹಾಗೂ ಜಿಲ್ಲಾಢಳಿತ ರೈತರ ಹಿತ ಕಾಯುವ ಕೆಲಸ ಮಾಡುತ್ತದೆ ಎಂದರು.
ಕಬ್ಬು ಸಾಗಾಣಿಕಾ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡುವ ಕಬ್ಬು ಖರೀದಿ ಹಣದಲ್ಲಿ ಕಟಾವು ಮಾಡುವಂತಿಲ್ಲ. ಸಕ್ಕರೆ ಕಾರ್ಖಾನೆಗಳು ಲಾರಿ ಮಾಲೀಕರಿಗೆ ಕಬ್ಬು ಸಾಕಾಣಿಕೆ ವೆಚ್ಚವನ್ನು ಭರಿಸುವ ಬಗ್ಗೆ ಚರ್ಚಿಸಿ ರೈತರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಲಾರಿ ಮಾಲೀಕರು ಲಾರಿ ಆಯುಕ್ತಲಾಯದಿಂದ ನಿಗಧಿ ಪಡಿಸಿರುವ ದರವನ್ನು ಯಾವುದೇ ರೈತರ ಮೇಲೆ ಏರುವಂತಿಲ್ಲ. ರೈತರ ಹಿತ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಲಾರಿ ಮಾಲೀಕರು ಹಾಗೂ ಸಕ್ಕರೆ ಕಾರ್ಖಾನೆಗಳು ಜೊತೆಗೂಡಿ ಸಮನ್ವಯ ಸಾಧಿಸಿ ವೆಚ್ಚವನ್ನು ಭರಿಸಿ, ಸಕ್ಕರೆ ಕಾರ್ಖಾನೆಗಳು ತಮ್ಮ ಮುಖ್ಯಸ್ಥರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಿ ಎಂದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 206 ಬ್ಯಾಚ್ ಗಳಾಗಿ ಕಬ್ಬು ಕಟಾವು ಮಾಡುವವರು ಆಗಮಿಸಿದ್ದಾರೆ, ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡುವವರ ಕೊರತೆ ಇರುವುದರಿಂದ ಹೊರ ಜಿಲ್ಲೆ ಹೊರ ರಾಜ್ಯದಿಂದ ಬಂದು ಕಟಾವು ಮಾಡಿ ಸಾಗಾಣಿಕೆಯನ್ನು ಅವರೇ ಮಾಡುತ್ತಿದ್ದಾರೆ ಎಂದರು.
ಲಾರಿ ಮಾಲೀಕರಾಗಲಿ ಸಕ್ಕರೆ ಕಾರ್ಖಾನೆಗಳಾಗಲಿ ರೈತರಿಗೆ ಸಾಗಾಣಿಕೆ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವಂತಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಲಾರಿ ಮಾಲೀಕರ ಅಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…