ಮಂಡ್ಯ

ಕಬ್ಬು ಸಾಗಾಣಿಕೆ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ: ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ‌ಪರಿಹರಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹಾಗೂ ಜಿಲ್ಲಾಢಳಿತ ರೈತರ ಹಿತ ಕಾಯುವ ಕೆಲಸ ಮಾಡುತ್ತದೆ ಎಂದರು.

ಕಬ್ಬು ಸಾಗಾಣಿಕಾ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡುವ ಕಬ್ಬು ಖರೀದಿ ಹಣದಲ್ಲಿ ಕಟಾವು ಮಾಡುವಂತಿಲ್ಲ. ಸಕ್ಕರೆ ಕಾರ್ಖಾನೆಗಳು ಲಾರಿ ಮಾಲೀಕರಿಗೆ ಕಬ್ಬು ಸಾಕಾಣಿಕೆ ವೆಚ್ಚವನ್ನು ಭರಿಸುವ ಬಗ್ಗೆ ಚರ್ಚಿಸಿ ರೈತರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು‌.

ಜಿಲ್ಲಾ ಲಾರಿ ಮಾಲೀಕರು ಲಾರಿ ಆಯುಕ್ತಲಾಯದಿಂದ ನಿಗಧಿ ಪಡಿಸಿರುವ ದರವನ್ನು ಯಾವುದೇ ರೈತರ ಮೇಲೆ ಏರುವಂತಿಲ್ಲ. ರೈತರ ಹಿತ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಲಾರಿ ಮಾಲೀಕರು ಹಾಗೂ ಸಕ್ಕರೆ ಕಾರ್ಖಾನೆಗಳು ಜೊತೆಗೂಡಿ ಸಮನ್ವಯ ಸಾಧಿಸಿ ವೆಚ್ಚವನ್ನು ಭರಿಸಿ, ಸಕ್ಕರೆ ಕಾರ್ಖಾನೆಗಳು ತಮ್ಮ ಮುಖ್ಯಸ್ಥರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಿ ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 206 ಬ್ಯಾಚ್ ಗಳಾಗಿ ಕಬ್ಬು ಕಟಾವು ಮಾಡುವವರು ಆಗಮಿಸಿದ್ದಾರೆ, ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡುವವರ ಕೊರತೆ ಇರುವುದರಿಂದ ಹೊರ ಜಿಲ್ಲೆ ಹೊರ ರಾಜ್ಯದಿಂದ ಬಂದು ಕಟಾವು ಮಾಡಿ ಸಾಗಾಣಿಕೆಯನ್ನು ಅವರೇ ಮಾಡುತ್ತಿದ್ದಾರೆ ಎಂದರು.

ಲಾರಿ ಮಾಲೀಕರಾಗಲಿ ಸಕ್ಕರೆ ಕಾರ್ಖಾನೆಗಳಾಗಲಿ ರೈತರಿಗೆ ಸಾಗಾಣಿಕೆ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವಂತಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಲಾರಿ ಮಾಲೀಕರ ಅಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

2 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago