ಮಂಡ್ಯ

ಕಬ್ಬು ಸಾಗಾಣಿಕೆ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ: ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ‌ಪರಿಹರಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹಾಗೂ ಜಿಲ್ಲಾಢಳಿತ ರೈತರ ಹಿತ ಕಾಯುವ ಕೆಲಸ ಮಾಡುತ್ತದೆ ಎಂದರು.

ಕಬ್ಬು ಸಾಗಾಣಿಕಾ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡುವ ಕಬ್ಬು ಖರೀದಿ ಹಣದಲ್ಲಿ ಕಟಾವು ಮಾಡುವಂತಿಲ್ಲ. ಸಕ್ಕರೆ ಕಾರ್ಖಾನೆಗಳು ಲಾರಿ ಮಾಲೀಕರಿಗೆ ಕಬ್ಬು ಸಾಕಾಣಿಕೆ ವೆಚ್ಚವನ್ನು ಭರಿಸುವ ಬಗ್ಗೆ ಚರ್ಚಿಸಿ ರೈತರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು‌.

ಜಿಲ್ಲಾ ಲಾರಿ ಮಾಲೀಕರು ಲಾರಿ ಆಯುಕ್ತಲಾಯದಿಂದ ನಿಗಧಿ ಪಡಿಸಿರುವ ದರವನ್ನು ಯಾವುದೇ ರೈತರ ಮೇಲೆ ಏರುವಂತಿಲ್ಲ. ರೈತರ ಹಿತ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಲಾರಿ ಮಾಲೀಕರು ಹಾಗೂ ಸಕ್ಕರೆ ಕಾರ್ಖಾನೆಗಳು ಜೊತೆಗೂಡಿ ಸಮನ್ವಯ ಸಾಧಿಸಿ ವೆಚ್ಚವನ್ನು ಭರಿಸಿ, ಸಕ್ಕರೆ ಕಾರ್ಖಾನೆಗಳು ತಮ್ಮ ಮುಖ್ಯಸ್ಥರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಿ ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 206 ಬ್ಯಾಚ್ ಗಳಾಗಿ ಕಬ್ಬು ಕಟಾವು ಮಾಡುವವರು ಆಗಮಿಸಿದ್ದಾರೆ, ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡುವವರ ಕೊರತೆ ಇರುವುದರಿಂದ ಹೊರ ಜಿಲ್ಲೆ ಹೊರ ರಾಜ್ಯದಿಂದ ಬಂದು ಕಟಾವು ಮಾಡಿ ಸಾಗಾಣಿಕೆಯನ್ನು ಅವರೇ ಮಾಡುತ್ತಿದ್ದಾರೆ ಎಂದರು.

ಲಾರಿ ಮಾಲೀಕರಾಗಲಿ ಸಕ್ಕರೆ ಕಾರ್ಖಾನೆಗಳಾಗಲಿ ರೈತರಿಗೆ ಸಾಗಾಣಿಕೆ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವಂತಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಲಾರಿ ಮಾಲೀಕರ ಅಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago