ಮಂಡ್ಯ

ಕಬ್ಬು ಸಾಗಾಣಿಕೆ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ: ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ‌ಪರಿಹರಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹಾಗೂ ಜಿಲ್ಲಾಢಳಿತ ರೈತರ ಹಿತ ಕಾಯುವ ಕೆಲಸ ಮಾಡುತ್ತದೆ ಎಂದರು.

ಕಬ್ಬು ಸಾಗಾಣಿಕಾ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡುವ ಕಬ್ಬು ಖರೀದಿ ಹಣದಲ್ಲಿ ಕಟಾವು ಮಾಡುವಂತಿಲ್ಲ. ಸಕ್ಕರೆ ಕಾರ್ಖಾನೆಗಳು ಲಾರಿ ಮಾಲೀಕರಿಗೆ ಕಬ್ಬು ಸಾಕಾಣಿಕೆ ವೆಚ್ಚವನ್ನು ಭರಿಸುವ ಬಗ್ಗೆ ಚರ್ಚಿಸಿ ರೈತರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು‌.

ಜಿಲ್ಲಾ ಲಾರಿ ಮಾಲೀಕರು ಲಾರಿ ಆಯುಕ್ತಲಾಯದಿಂದ ನಿಗಧಿ ಪಡಿಸಿರುವ ದರವನ್ನು ಯಾವುದೇ ರೈತರ ಮೇಲೆ ಏರುವಂತಿಲ್ಲ. ರೈತರ ಹಿತ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಲಾರಿ ಮಾಲೀಕರು ಹಾಗೂ ಸಕ್ಕರೆ ಕಾರ್ಖಾನೆಗಳು ಜೊತೆಗೂಡಿ ಸಮನ್ವಯ ಸಾಧಿಸಿ ವೆಚ್ಚವನ್ನು ಭರಿಸಿ, ಸಕ್ಕರೆ ಕಾರ್ಖಾನೆಗಳು ತಮ್ಮ ಮುಖ್ಯಸ್ಥರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಿ ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 206 ಬ್ಯಾಚ್ ಗಳಾಗಿ ಕಬ್ಬು ಕಟಾವು ಮಾಡುವವರು ಆಗಮಿಸಿದ್ದಾರೆ, ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡುವವರ ಕೊರತೆ ಇರುವುದರಿಂದ ಹೊರ ಜಿಲ್ಲೆ ಹೊರ ರಾಜ್ಯದಿಂದ ಬಂದು ಕಟಾವು ಮಾಡಿ ಸಾಗಾಣಿಕೆಯನ್ನು ಅವರೇ ಮಾಡುತ್ತಿದ್ದಾರೆ ಎಂದರು.

ಲಾರಿ ಮಾಲೀಕರಾಗಲಿ ಸಕ್ಕರೆ ಕಾರ್ಖಾನೆಗಳಾಗಲಿ ರೈತರಿಗೆ ಸಾಗಾಣಿಕೆ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವಂತಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಲಾರಿ ಮಾಲೀಕರ ಅಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

6 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

2 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

4 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

15 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

15 hours ago