ಮಂಡ್ಯ

ಬೇಸಿಗೆ ಬಂತು, ನೀರಿನ ಸಮಸ್ಯೆಯಾಗದಂತೆ ನೋಡ್ಕೊಳ್ಳಿ : ಡಿಸಿ ಕುಮಾರ

ಮಂಡ್ಯ : ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಇಂದು (ಮಾ.11) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೀರು ಬಳಕೆಯ ಶುಲ್ಕವನ್ನು ಶೇ.13 ರಷ್ಟು ಜನರು ಮಾತ್ರ ಪಾವತಿಸಿದ್ದಾರೆ, ಬಳಕೆದಾರರು ನೀರಿಗೆ ಶುಲ್ಕ ಪಾವತಿಸದಿದ್ದಲ್ಲಿ ವಸೂಲಾತಿಗೆ ಕ್ರಮ ವಹಿಸಿ ಬೇಸಿಗೆಯಲ್ಲಿ ಒದಗಿಸಲಾಗುವ ನೀರಿನ ಗುಣಮಟ್ಟವನ್ನು ಕಾಲ ಕಾಲಕ್ಕೆ ಸಂಶೋಧನಾ ಕೇಂದ್ರಗಳಿಗೆ ಕಳುಹಿಸಿ ಪರೀಕ್ಷಿಸಿ ಎಂದು ಹೇಳಿದರು.

2015 ರ ಸರ್ವೆಯ ಪ್ರಾಕಾರ ವಸತಿ ಹಾಗೂ ನಿವೇಶನ ರಹಿತರು ಜಿಲ್ಲೆಯಲ್ಲಿ 5312 ಜನರನ್ನು ಗುರುತಿಸಲಾಗಿದೆ, ಅದರಲ್ಲಿ 4483 ಅರ್ಹ ಫಲಾನುಭವಿಗಳಿದ್ದಾರೆ, ಪ್ರಸ್ತುತ ನಗರದಲ್ಲಿ ಸರ್ಕಾರಿ ನಿವೇಶನಗಳು ಲಭ್ಯ ಇರುವುದಿಲ್ಲದ ಕಾರಣ ಅರ್ಹ ಫಲಾನುಭವಿಗಳಿಗೆ ಪರ್ಯಾಯ ವ್ಯವಸ್ಥೆ ರೂಪಿಸಿ ಎಂದು ತಿಳಿಸಿದರು.

ವಸತಿ ಹಾಗೂ ನಿವೇಶನ ರಹಿತರ ಪಟ್ಟಿಯನ್ನು ಸೂಕ್ತವಾಗಿ ಪರಿಶೀಲಿಸಿ, ನಿವೇಶನ ರಹಿತರು ಮತ್ತು ವಸತಿ ರಹಿತರ ಪ್ರತ್ಯೇಕ ಪಟ್ಟಿಯನ್ನು ಮುಂದಿನ ಸಭೆಗೆ ಪ್ರತ್ಯೇಕ ಪಟ್ಟಿ ಸಿದ್ಧಪಡಿಸಿ ಮುಂದಿನ ಸಭೆಯಲ್ಲಿ ಸಲ್ಲಿಸುವುದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಒಳಪಡುವ ಈಗಾಗಲೇ ದುರಸ್ಥಿಗೊಂಡಿರುವ ಸಾರ್ವಜನಿಕ ಹಾಗೂ ಸಮುದಾಯದ ಶೌಚಾಲಯಗಳನ್ನು ಯಾವುದೇ ವಿಳಂಬ ಮಾಡದೆ ಶ್ರೀಘವಾಗಿ ಪ್ರಾರಂಭಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಇ-ಆಸ್ತಿಯಲ್ಲಿ ನೊಂದಣಿ ಕಡಿಮೆ ಪ್ರಮಾಣದಲ್ಲಿರುವುದು ಗಮನಕ್ಕೆ ಬಂದಿರುತ್ತದೆ, ಸಾರ್ವಜನಿಕರಿಗೆ ಇ-ಆಸ್ತಿಯಲ್ಲಿ ತಮ್ಮ ಆಸ್ತಿಗಳನ್ನು ನೊಂದಾಯಿಸಿಕೊಳುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಿ ಇ-ಆಸ್ತಿಯಲ್ಲಿ ನೊಂದಾಯಿಸಿಕೊಳ್ಳುವಂತೆ ಮಾಡಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜಾರಿಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರಿ ಅಂಗಡಿ ಮಳಿಗೆಗಳ ಬಾಡಿಗೆಯನ್ನು ವರ್ಷಗಳಿಂದಲೂ ಪಾವತಿಸದೇ ಇರುವವರಿಗೆ ನೋಟಿಸ್ ಜಾರಿ ಮಾಡಿ, ಅಂಗಡಿಯ ಮಾಲೀಕರು ಮಳಿಗೆಗಳ ಬಾಡಿಗೆಯನ್ನು ಪಾವತಿ ಮಾಡದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಜಾರಿಗೊಳಿಸಿ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಒಳಪಡುವ ಅಧಿಕೃತ ಜಾಹಿರಾತು ಫಲಕಗಳಿಗೆ ಸೂಕ್ತ ಶುಲ್ಕ ವಿಧಿಸಿ, ನಿಗಧಿತ ಜಾಹೀರಾತು ಶುಲ್ಕವನ್ನು ವಸೂಲಾತಿ ಮಾಡಿ, ಸ್ವಿಚ್ಛ್ ಭಾರತ್ ಅಭಿಯಾನದಡಿ ಸರಿಯಾದ ವೈಜ್ಞಾನಿಕ ಕ್ರಮ ಅನುಸರಿಸಿ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡಿ ಎಂದು ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ಮಾಯಣ್ಣಗೌಡ, ನಗರಾಭಿವೃದ್ಧಿ ಕಾರ್ಯಪಾಲಕ ಇಂಜಿನಿಯರ್ ಪ್ರತಾಪ್ .ಆರ್, ನಗರಸಭೆ ಪೌರಾಯುಕ್ತೆ ಯು.ಪಿ. ಪಂಪಾಶ್ರೀ, ವಿವಿಧ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳಾದ ಮೇಘ, ರುದ್ರೇಗೌಡ, ರವಿಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

12 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

12 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

16 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

21 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

21 hours ago