ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಜಿಲ್ಲೆಯ ಹಾಲನಹಳ್ಳಿ ಭಜರಂಗ ಸೇನೆಯ ರಾಜ್ಯ ಘಟಕ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಎನ್.ವಿ ಅಂಜಾರೀಯಾ ನೇತೃತ್ವದ ವಿಭಾಗೀಯ ಪೀಠ ಅಂಗೀಕರಿಸಿ, ವಾದ-ವಿವಾದ ಆಲಿಸಿ ಈ ನೋಟಿಸ್ ನೀಡಲು ಆದೇಶಿಸಿತು. ಮತ್ತು ಈ ವಿಚಾರಣೆಯನ್ನು ಜುಲೈ. 11ಕ್ಕೆ ಮುಂದೂಡಲಾಯಿತು.
ಈ ಅರ್ಜಿಯಲ್ಲಿ ಮೂಡಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಅರಸರು ಪೋಷಿಸುತ್ತಾ ಬಂದಿದ್ದರು. ಈ ದೇವಾಲಯವನ್ನು ಟಿಪ್ಪು ತನ್ನ ಅಧಿಕಾರಾವಧಿಯಲ್ಲಿ ದ್ವಂಸ ಮಾಡಿ ಬಳಿಕ ಅದೇ ಜಾಗದಲ್ಲಿ ಜಾಮೀಯಾ ಮಸೀದಿಯನ್ನು ನಿರ್ಮಿಸಿದ್ದರು ಎಂದು ಅರ್ಜಿಯಲ್ಲಿ ಅಕ್ಷೇಪಿಸಿದ್ದರು. ಈ ಸಂಬಂಧ ನ್ಯಾಯಾಲಯ ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿದ್ದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…