Categories: ಮಂಡ್ಯ

ಕೆಆರ್‌ಎಸ್‌ ಹಿನ್ನೀರಿನಲ್ಲಿ ಒತ್ತುವರಿ ತೆರವಿಗೆ ಸರ್ವೆ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಕೆಆರ್‌ಎಸ್‌ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಕುಡಿಯುವ ನೀರು, ಕೃಷಿ ಮತ್ತು ವಿದ್ಯುತ್‌ ಉತ್ಪಾದನೆಗೆ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ, ಪಾಂಡವಪುರ ಉಪವಿಭಾಗ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

3 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

3 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

3 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

11 hours ago