ಮಂಡ್ಯ : ಇಂದಿನಿಂದ ಆರಂಭವಾದ ಸಮೀಕ್ಷೆಯು ಜಾತಿ ಸಮೀಕ್ಷೆಯಾಗಿರುವುದಿಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆದಾರರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ನಗರದ ವಾರ್ಡ್ ನಂ. ೨೦ರ ಎಚ್.ಸಿ.ಬಸವರಾಜು ಅವರ ಮನೆಯಿಂದ ಚಾಲನೆ ನೀಡಿ ಮಾತನಾಡಿದ ಅವರು, ಸಮೀಕ್ಷೆದಾರರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಿ, ಅವರಿಗೆ ಅರ್ಥವಾಗುವ ರೀತಿ ನೀಡಿರುವ ಪ್ರಶ್ನಾವಳಿಗಳ ಪ್ರಶ್ನೆಯನ್ನು ಕೇಳಿ ಉತ್ತರ ಪಡೆಯಿರಿ ಎಂದರು.
ಮಂಡ್ಯ ಜಿಲ್ಲೆಯಲ್ಲಿ ೫,೨೯,೦೩೨ ಕುಟುಂಬಗಳಿದ್ದು, ೪೪೪೬ ಗಣತಿದಾರರನ್ನು ನೇಮಕ ಮಾಡಲಾಗಿದೆ. ಒಬ್ಬ ಗಣತಿದಾರರಿಗೆ ೧೨೦ ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. ೨೦ ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯ ಸಂಪನ್ಮೂಲ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮನೆಯ ಮುಖ್ಯಸ್ಥರ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮನೆ ವಿಳಾಸ ಮೊಬೈಲ್ ಸಂಖ್ಯೆ, ರೇಷನ್ ಕಾರ್ಡ್ ಸಂಖ್ಯೆ, ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ ಸಂಖ್ಯೆ, ಕುಟುಂಬದ ಒಟ್ಟು ಸದಸ್ಯರು, ಧರ್ಮ ಜಾತಿ / ಉಪಜಾತಿ, ಜಾತಿ ವರ್ಗ, ಜಾತಿ ಪ್ರಮಾಣ ಪತ್ರ, ಪ್ರಮಾಣ ಪತ್ರ ಸಂಖ್ಯೆ, ಜನ್ಮ ದಿನಾಂಕ, ವಯಸ್ಸು, ಲಿಂಗ, ವೈವಾಹಿಕ ಸ್ಥಿತಿ, ಜನ್ಮ ಸ್ಥಳ, ವಿದ್ಯಾಭ್ಯಾಸದ ಮಟ್ಟ, ಮನೆಯ ಮುಖ್ಯ ಉದ್ಯೋಗ ಹೀಗೆ ಒಟ್ಟು ೬೦ ಪ್ರಶ್ನೆಗಳನ್ನು ಕೇಳಲಾಗುವುದು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಪಿ. ರವಿಕುಮಾರ್ ಗಣಿಗ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…