ಮಂಡ್ಯ

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಶ್ಮಿ(೩೫) ಎಂಬಾಕೆ ಕೊಲೆಯಾದ ಗೃಹಿಣಿಯಾಗಿದ್ದು, ಪತಿ ರಮೇಶ್(೪೨) ಎಂಬಾತ ಕಬ್ಬಿಣದ ರಾಡ್‌ನಿಂದ ತಲೆಗೆ ಒಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಇವರಿಗೆ ೧೩ ವರ್ಷದ ಮಗ, ೧೨ ವರ್ಷದ ಪುತ್ರಿ ಇದ್ದಾರೆ. ಕಳೆದ ಹಲವು ದಿನಗಳಿಂದಲೂ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿದ್ದು, ಅಕ್ಕಪಕ್ಕದವರು ಇದು ಮಾಮೂಲಿ ಎಂದುಕೊಂಡಿದ್ದರು. ಇತ್ತೀಚೆಗೆ ಇವರ ಜಗಳ ಬಿಡಿಸಲೂ ಯಾರೂ ಬರುತ್ತಿರಲಿಲ್ಲ ಎನ್ನಲಾಗಿದೆ. ರಮೇಶ ಹೊರಗೇ ಊಟ ಮಾಡಿಕೊಂಡು ಬರುತ್ತಿದ್ದರೆ, ರಶ್ಮಿ ಮನೆಯಲ್ಲಿ ಊಟ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ.

ಬುಧವಾರ ರಾತ್ರಿ ಸುಮಾರು ೭.೩೦ರ ಸಮಯದಲ್ಲಿ ಜಗಳ ವಿಕೋಪಕ್ಕೆ ಹೋಗಿ ಪತಿ ರಮೇಶ ಕಬ್ಬಿಣದ ಸಲಾಕೆಯಿಂದ ತನ್ನ ಪತ್ನಿ ರಶ್ಮಿಯ ತಲೆಗೆ ಹೊಡೆದು ಹೊರ ಬಂದಿದ್ದಾನೆ. ಬಂದು ಸ್ನೇಹಿತರಿಗೆ ಪೋನ್ ಮಾಡಿ ನನ್ನ ಹೆಂಡತಿಯನ್ನು ಹೊಡೆದು ಕೊಂದಿರುವುದಾಗಿ ವಿಷಯ ತಿಳಿಸಿದ್ದು, ಕೂಡಲೇ ಮನೆಗೆ ಬಂದು ನೋಡಲಾಗಿ ರಕ್ತದ ಮಡುವಿನಲ್ಲಿ ರಶ್ಮಿ ಬಿದ್ದಿದ್ದರೆನ್ನಲಾಗಿದೆ.

ಇನ್ನೂ ಉಸಿರಾಡುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಗಾಯಾಳುವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದರಾದರೂ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಈ ಸಂಬಂಧ ಅರಕೆರೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago