ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಶ್ಮಿ(೩೫) ಎಂಬಾಕೆ ಕೊಲೆಯಾದ ಗೃಹಿಣಿಯಾಗಿದ್ದು, ಪತಿ ರಮೇಶ್(೪೨) ಎಂಬಾತ ಕಬ್ಬಿಣದ ರಾಡ್ನಿಂದ ತಲೆಗೆ ಒಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಇವರಿಗೆ ೧೩ ವರ್ಷದ ಮಗ, ೧೨ ವರ್ಷದ ಪುತ್ರಿ ಇದ್ದಾರೆ. ಕಳೆದ ಹಲವು ದಿನಗಳಿಂದಲೂ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿದ್ದು, ಅಕ್ಕಪಕ್ಕದವರು ಇದು ಮಾಮೂಲಿ ಎಂದುಕೊಂಡಿದ್ದರು. ಇತ್ತೀಚೆಗೆ ಇವರ ಜಗಳ ಬಿಡಿಸಲೂ ಯಾರೂ ಬರುತ್ತಿರಲಿಲ್ಲ ಎನ್ನಲಾಗಿದೆ. ರಮೇಶ ಹೊರಗೇ ಊಟ ಮಾಡಿಕೊಂಡು ಬರುತ್ತಿದ್ದರೆ, ರಶ್ಮಿ ಮನೆಯಲ್ಲಿ ಊಟ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ.
ಬುಧವಾರ ರಾತ್ರಿ ಸುಮಾರು ೭.೩೦ರ ಸಮಯದಲ್ಲಿ ಜಗಳ ವಿಕೋಪಕ್ಕೆ ಹೋಗಿ ಪತಿ ರಮೇಶ ಕಬ್ಬಿಣದ ಸಲಾಕೆಯಿಂದ ತನ್ನ ಪತ್ನಿ ರಶ್ಮಿಯ ತಲೆಗೆ ಹೊಡೆದು ಹೊರ ಬಂದಿದ್ದಾನೆ. ಬಂದು ಸ್ನೇಹಿತರಿಗೆ ಪೋನ್ ಮಾಡಿ ನನ್ನ ಹೆಂಡತಿಯನ್ನು ಹೊಡೆದು ಕೊಂದಿರುವುದಾಗಿ ವಿಷಯ ತಿಳಿಸಿದ್ದು, ಕೂಡಲೇ ಮನೆಗೆ ಬಂದು ನೋಡಲಾಗಿ ರಕ್ತದ ಮಡುವಿನಲ್ಲಿ ರಶ್ಮಿ ಬಿದ್ದಿದ್ದರೆನ್ನಲಾಗಿದೆ.
ಇನ್ನೂ ಉಸಿರಾಡುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಗಾಯಾಳುವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದರಾದರೂ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಈ ಸಂಬಂಧ ಅರಕೆರೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…