ಮಂಡ್ಯ: ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ರಾಮಂದೂರು ಕೆರೆ ಬಳಿ ನಡೆದಿದೆ.
ರಾಮನಾಥ ಮೋಳೆ ಗ್ರಾಮದ 21 ವರ್ಷದ ಯುವಕ ಮಂಜುನಾಥ್ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.
ಮಂಜುನಾಥ್ ತಲೆಯ ಭಾಗದಲ್ಲಿ ಕಲ್ಲಿನಿಂದ ಹೊಡೆದಿರುವ ಗುರುತುಗಳು ಆತನ ಸಾವಿನ ಬಗ್ಗೆ ಅನುಮಾನ ಹುಟ್ಟುಹಾಕಿವೆ. ಮಗ ಅಪಘಾತದಲ್ಲಿ ಸಾವನ್ನಪ್ಪಿಲ್ಲ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಮಂಜುನಾಥ್, ಕಳೆದ ಆರು ತಿಂಗಳ ಹಿಂದೆ ಹೆಣ್ಣು ಕೇಳಲು ಹೋದಾಗ ಯುವತಿಯ ಮನೆಯವರು ನಿರಾಕರಿಸಿದ್ದರು.
ಈ ವೇಳೆ ಪೋಷಕರನ್ನು ಬಿಟ್ಟು ಬಂದ ಅಪ್ರಾಪ್ತೆಯನ್ನು ಮಂಜುನಾಥ್ ತನ್ನ ಅಜ್ಜಿ ಮನೆಯಲ್ಲಿರಿಸಿದ್ದ. ಆಕೆಗೆ 18 ವರ್ಷ ತುಂಬಲು ಇನ್ನು 2 ತಿಂಗಳು ಬಾಕಿಯಿದ್ದ ಹಿನ್ನೆಲೆಯಲ್ಲಿ 18 ವರ್ಷ ತುಂಬಿದ ಬಳಿಕ ಮದುವೆ ಆಗಲು ನಿರ್ಧರಿಸಿದ್ದ ಎನ್ನಲಾಗಿದೆ.
ಆದರೆ ಇದ್ದಕ್ಕಿದ್ದಂತೆ ಮಂಜುನಾಥ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…