mysore sustenale
ಮಂಡ್ಯ : ಗ್ರಾಮ ಪಂಚಾಯತ್ ಗಳು ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಂಕಲ್ಪ ಮಾಡುವ ಮೂಲಕ ಗ್ರಾಮ ಪಂಚಾಯತ್ ಗಳ ಸಮಗ್ರ ಅಭಿವೃದ್ಧಿ, ಕಾರ್ಯಕ್ಷಮತೆ ಹಾಗೂ ಪ್ರಗತಿಯನ್ನು ಉತ್ತಮಗೊಳಿಸಬೇಕು ಎಂದು ಗ್ರಾ.ಪಂ.ಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಕರೆ ನೀಡಿದರು.
ಗುರುವಾರ ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಪಂಚಾಯತ್ ಪ್ರಗತಿ ಸೂಚ್ಯಂಕ 2.0 ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಪಂಚಾಯತ್ ಗಳನ್ನು ಬಡತನ ಮುಕ್ತ, ಆರೋಗ್ಯವಂತ, ಮಹಿಳಾ ಸ್ನೇಹಿ, ಮಕ್ಕಳ ಸ್ನೇಹಿ, ಸಾಮಾಜಿಕ ಸುರಕ್ಷಾ ಹಾಗೂ ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಗ್ರಾಮ ಪಂಚಾಯತ್ ಗಳನ್ನಾಗಿಸಲು ಶ್ರಮಿಸುವಂತೆ ತಿಳಿಸಿದರು.
ಪಂಚಾಯತ್ ಪ್ರಗತಿ ಸೂಚ್ಯಂಕದಲ್ಲಿ 9 ವಿಷಯಗಳಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಯು 9 ವಿಷಯಗಳಲ್ಲಿಯೂ ನಿಗಧಿತ ಗುರಿ ಸಾಧಿಸಿದಾಗ ಮಾತ್ರ ಉತ್ತಮ ಗ್ರಾಮ ಪಂಚಾಯಿತಿ ಆಗಲು ಸಾಧ್ಯ. ಆದ್ದರಿಂದ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಪಡೆಯುವಂತೆ ಸೂಚಿಸಿದರು.
ಪಂಚಾಯತ್ ಪ್ರಗತಿ ಸೂಚ್ಯಂಕಕ್ಕೆ ಮಾಹಿತಿ ದಾಖಲಿಸುವ ಕುರಿತು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಸಹಾಯಕ ನಿರ್ದೇಶಕರು (ಪಂ.ರಾಜ್) ಹಾಗೂ 14ನೇ ಕಾಡೂರು ಗ್ರಾ.ಪಂ. ಅಧ್ಯಕ್ಷರಾದ ಜಲೇಂದ್ರ ಶೆಟ್ಟಿ ಅವರನ್ನು ತರಬೇತಿ ಕಾರ್ಯಾಗಾರದಲ್ಲಿ ತಮ್ಮ ಜಿಲ್ಲೆಯ ಅನುಭವ ಹಂಚಿಕೊಳ್ಳಲು ಆಹ್ವಾನಿಸಲಾಗಿತ್ತು.
ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ, ಧನುಷ್, ಉಪಕಾರ್ಯದರ್ಶಿ (ಆಡಳಿತ) ಧನರಾಜ್, ಮುಖ್ಯ ಲೆಕ್ಕಾಧಿಕಾರಿ, ಶ್ರೀನಿವಾಸ ನಾಯಕ್, ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷರಾದ ಪ್ರದೀಪ್, ಉಪಾಧ್ಯಕ್ಷರಾದ ಸುವರ್ಣಾವತಿ ಹಾಗೂ ಸದಸ್ಯರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಆಯ್ದ ಗ್ರಾಮ ಪಂಚಾಯತ್ ಗಳ ಪಿಡಿಒ ಮತ್ತು ಡಿಇಒ ಗಳು ಹಾಜರಿದ್ದರು
ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ…
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…