ಮಂಡ್ಯ

ಸುಸ್ಥಿರ ಅಭಿವೃದ್ಧಿ ಗುರಿ ಸಂಕಲ್ಪ : ಜಿ.ಪಂ ಸಿಇಒ ಕೆ.ಆರ್.ನಂದಿನಿ ಕರೆ

ಮಂಡ್ಯ : ಗ್ರಾಮ ಪಂಚಾಯತ್ ಗಳು ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಂಕಲ್ಪ ಮಾಡುವ ಮೂಲಕ ಗ್ರಾಮ ಪಂಚಾಯತ್ ಗಳ ಸಮಗ್ರ ಅಭಿವೃದ್ಧಿ, ಕಾರ್ಯಕ್ಷಮತೆ ಹಾಗೂ ಪ್ರಗತಿಯನ್ನು ಉತ್ತಮಗೊಳಿಸಬೇಕು ಎಂದು ಗ್ರಾ.ಪಂ.ಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಕರೆ ನೀಡಿದರು.

ಗುರುವಾರ ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಪಂಚಾಯತ್ ಪ್ರಗತಿ ಸೂಚ್ಯಂಕ 2.0 ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಪಂಚಾಯತ್ ಗಳನ್ನು ಬಡತನ ಮುಕ್ತ, ಆರೋಗ್ಯವಂತ, ಮಹಿಳಾ ಸ್ನೇಹಿ, ಮಕ್ಕಳ ಸ್ನೇಹಿ, ಸಾಮಾಜಿಕ ಸುರಕ್ಷಾ ಹಾಗೂ ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಗ್ರಾಮ ಪಂಚಾಯತ್ ಗಳನ್ನಾಗಿಸಲು ಶ್ರಮಿಸುವಂತೆ ತಿಳಿಸಿದರು.

ಪಂಚಾಯತ್ ಪ್ರಗತಿ ಸೂಚ್ಯಂಕದಲ್ಲಿ 9 ವಿಷಯಗಳಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಯು 9 ವಿಷಯಗಳಲ್ಲಿಯೂ ನಿಗಧಿತ ಗುರಿ ಸಾಧಿಸಿದಾಗ ಮಾತ್ರ ಉತ್ತಮ ಗ್ರಾಮ ಪಂಚಾಯಿತಿ ಆಗಲು ಸಾಧ್ಯ. ಆದ್ದರಿಂದ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಪಡೆಯುವಂತೆ ಸೂಚಿಸಿದರು.

ಪಂಚಾಯತ್ ಪ್ರಗತಿ ಸೂಚ್ಯಂಕಕ್ಕೆ ಮಾಹಿತಿ ದಾಖಲಿಸುವ ಕುರಿತು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಸಹಾಯಕ ನಿರ್ದೇಶಕರು (ಪಂ.ರಾಜ್) ಹಾಗೂ 14ನೇ ಕಾಡೂರು ಗ್ರಾ.ಪಂ. ಅಧ್ಯಕ್ಷರಾದ ಜಲೇಂದ್ರ ಶೆಟ್ಟಿ ಅವರನ್ನು ತರಬೇತಿ ಕಾರ್ಯಾಗಾರದಲ್ಲಿ ತಮ್ಮ ಜಿಲ್ಲೆಯ ಅನುಭವ ಹಂಚಿಕೊಳ್ಳಲು ಆಹ್ವಾನಿಸಲಾಗಿತ್ತು.

ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ, ಧನುಷ್, ಉಪಕಾರ್ಯದರ್ಶಿ (ಆಡಳಿತ) ಧನರಾಜ್, ಮುಖ್ಯ ಲೆಕ್ಕಾಧಿಕಾರಿ, ಶ್ರೀನಿವಾಸ ನಾಯಕ್, ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷರಾದ ಪ್ರದೀಪ್, ಉಪಾಧ್ಯಕ್ಷರಾದ ಸುವರ್ಣಾವತಿ ಹಾಗೂ ಸದಸ್ಯರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಆಯ್ದ ಗ್ರಾಮ ಪಂಚಾಯತ್ ಗಳ ಪಿಡಿಒ ಮತ್ತು ಡಿಇಒ ಗಳು ಹಾಜರಿದ್ದರು

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

2 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

3 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

10 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

10 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

15 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

15 hours ago