ಮಂಡ್ಯ: ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ. ಮಠಾಧೀಶರು ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮನುಷ್ಯತ್ವವನ್ನು ಕೊಲ್ಲುವ ಕೆಲಸ ಮಾಡಬೇಡಿ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು.
ಭಾನುವಾರ(ಜೂ.30) ಮಳವಳ್ಳಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆದಿ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಪ್ರಮುಖ ಜಾತಿಯವರೆಲ್ಲ ಮುಖ್ಯಮಂತ್ರಿಯಾಗಿದ್ದಾರೆ. ನಿಜಲಿಂಗಪ್ಪ, ಬೊಮ್ಮಾಯಿ, ವೀರೇಂದ್ರ ಪಾಟೀಲ್, ಯಡಿಯೂರಪ್ಪ, ಬಸವರಾಜು ಬೊಮ್ಮಯಿ ಒಂದು ವರ್ಗಕ್ಕೆ ಸೇರಿದರೆ, ಕಡಿದಾಳ್ ಮಂಜಪ್ಪ, ಕೆಂಗಲ್ ಹನುಮಂತಯ್ಯ, ದೇವೇಗೌಡ, ಸದಾನಂದಗೌಡ, ಕುಮಾರಸ್ವಾಮಿ ಇನ್ನೊಂದು ವರ್ಗಕ್ಕೆ ಸೇರಿದ್ದಾರೆ. ಈ ನಡುವೆ ದೇವರಾಜು ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಆದರೆ ಬಹುಸಂಖ್ಯಾತ ಜನರು ಒಂದು ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದರೂ ಕೆಲವು ಮಠಾಧೀಶರು ಸಿಎಂ ವಿಚಾರವಾಗಿ ಮಾತನಾಡಿದ್ದಾರೆ. ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಯಾವುದೋ ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ ಎಂದರು.
ನಾವು ಮಠಗಳು ಹಾಗೂ ಮಠಾಧೀಶರಿಗೆ ಗೌರವ ಕೊಡುತ್ತೇವೆ. ಮಠಾಧೀಶರನ್ನು ಅನುಸರಿಸುತ್ತಿದ್ದೇವೆ. ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮಠಾಧಿಪತಿಗಳು ಮನುಷ್ಯತ್ವ ಕೊಲ್ಲುವ ಕೆಲಸಕ್ಕೆ ಹೋಗಬೇಡಿ ಎಂದು ಶೋಷಿತ ಸಮಾಜದ ಪ್ರತಿನಿಧಿಯಾಗಿ ನಿಮ್ಮಲ್ಲಿ ನೋವು ತೋಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.
ಪಕ್ಷಗಳಲ್ಲಿ ಜಾತಿ ಹೆಸರಿನಲ್ಲಿ ಅಧಿಕಾರಿ ನೀಡುವುದು ಸರಿಯಲ್ಲ. ನಮ್ಮ ಪಕ್ಷಕ್ಕೆ ಹೈಕಮಾಂಡ್ ಮಾತೇ ಅಂತಿಮಾ. ಮಠಾಧೀಶರು ಒಂದು ಪಕ್ಷ, ನಾಯಕ ಹಾಗೂ ಜಾತಿ ಪರ ಮಾತನಾಡುವುದನ್ನ ಬಿಟ್ಟು ಎಲ್ಲಾ ಪಕ್ಷ ಹಾಗೂ ನಾಯಕರಿಗೂ ಆಶೀರ್ವಾದ ಮಾಡಬೇಕು ಎಂದರು.
ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…
ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…
ನಂಜನಗೂಡು : ಮಾರ್ಚ್ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…
ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…
ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…