ಮಂಡ್ಯ

ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಜಾತಿಯ ಧ್ವನಿಯಲ್ಲ:ಪಿ.ಎಂ ನರೇಂದ್ರ ಸ್ವಾಮಿ

ಮಂಡ್ಯ: ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ. ಮಠಾಧೀಶರು ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮನುಷ್ಯತ್ವವನ್ನು ಕೊಲ್ಲುವ ಕೆಲಸ ಮಾಡಬೇಡಿ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು.

ಭಾನುವಾರ(ಜೂ.30) ಮಳವಳ್ಳಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆದಿ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಪ್ರಮುಖ ಜಾತಿಯವರೆಲ್ಲ ಮುಖ್ಯಮಂತ್ರಿಯಾಗಿದ್ದಾರೆ. ನಿಜಲಿಂಗಪ್ಪ, ಬೊಮ್ಮಾಯಿ, ವೀರೇಂದ್ರ ಪಾಟೀಲ್‌, ಯಡಿಯೂರಪ್ಪ, ಬಸವರಾಜು ಬೊಮ್ಮಯಿ ಒಂದು ವರ್ಗಕ್ಕೆ ಸೇರಿದರೆ, ಕಡಿದಾಳ್‌ ಮಂಜಪ್ಪ, ಕೆಂಗಲ್‌ ಹನುಮಂತಯ್ಯ, ದೇವೇಗೌಡ, ಸದಾನಂದಗೌಡ, ಕುಮಾರಸ್ವಾಮಿ ಇನ್ನೊಂದು ವರ್ಗಕ್ಕೆ ಸೇರಿದ್ದಾರೆ. ಈ ನಡುವೆ ದೇವರಾಜು ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್‌, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಆದರೆ ಬಹುಸಂಖ್ಯಾತ ಜನರು ಒಂದು ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದರೂ ಕೆಲವು ಮಠಾಧೀಶರು ಸಿಎಂ ವಿಚಾರವಾಗಿ ಮಾತನಾಡಿದ್ದಾರೆ. ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಯಾವುದೋ ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ ಎಂದರು.

ನಾವು ಮಠಗಳು ಹಾಗೂ ಮಠಾಧೀಶರಿಗೆ ಗೌರವ ಕೊಡುತ್ತೇವೆ. ಮಠಾಧೀಶರನ್ನು ಅನುಸರಿಸುತ್ತಿದ್ದೇವೆ. ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮಠಾಧಿಪತಿಗಳು ಮನುಷ್ಯತ್ವ ಕೊಲ್ಲುವ ಕೆಲಸಕ್ಕೆ ಹೋಗಬೇಡಿ ಎಂದು ಶೋಷಿತ ಸಮಾಜದ ಪ್ರತಿನಿಧಿಯಾಗಿ ನಿಮ್ಮಲ್ಲಿ ನೋವು ತೋಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಪಕ್ಷಗಳಲ್ಲಿ ಜಾತಿ ಹೆಸರಿನಲ್ಲಿ ಅಧಿಕಾರಿ ನೀಡುವುದು ಸರಿಯಲ್ಲ. ನಮ್ಮ ಪಕ್ಷಕ್ಕೆ ಹೈಕಮಾಂಡ್‌ ಮಾತೇ ಅಂತಿಮಾ. ಮಠಾಧೀಶರು ಒಂದು ಪಕ್ಷ, ನಾಯಕ ಹಾಗೂ ಜಾತಿ ಪರ ಮಾತನಾಡುವುದನ್ನ ಬಿಟ್ಟು ಎಲ್ಲಾ ಪಕ್ಷ ಹಾಗೂ ನಾಯಕರಿಗೂ ಆಶೀರ್ವಾದ ಮಾಡಬೇಕು ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

42 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago