ಮಂಡ್ಯ: ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ. ಮಠಾಧೀಶರು ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮನುಷ್ಯತ್ವವನ್ನು ಕೊಲ್ಲುವ ಕೆಲಸ ಮಾಡಬೇಡಿ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಮನವಿ ಮಾಡಿದರು.
ಭಾನುವಾರ(ಜೂ.30) ಮಳವಳ್ಳಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆದಿ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಪ್ರಮುಖ ಜಾತಿಯವರೆಲ್ಲ ಮುಖ್ಯಮಂತ್ರಿಯಾಗಿದ್ದಾರೆ. ನಿಜಲಿಂಗಪ್ಪ, ಬೊಮ್ಮಾಯಿ, ವೀರೇಂದ್ರ ಪಾಟೀಲ್, ಯಡಿಯೂರಪ್ಪ, ಬಸವರಾಜು ಬೊಮ್ಮಯಿ ಒಂದು ವರ್ಗಕ್ಕೆ ಸೇರಿದರೆ, ಕಡಿದಾಳ್ ಮಂಜಪ್ಪ, ಕೆಂಗಲ್ ಹನುಮಂತಯ್ಯ, ದೇವೇಗೌಡ, ಸದಾನಂದಗೌಡ, ಕುಮಾರಸ್ವಾಮಿ ಇನ್ನೊಂದು ವರ್ಗಕ್ಕೆ ಸೇರಿದ್ದಾರೆ. ಈ ನಡುವೆ ದೇವರಾಜು ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಆದರೆ ಬಹುಸಂಖ್ಯಾತ ಜನರು ಒಂದು ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದರೂ ಕೆಲವು ಮಠಾಧೀಶರು ಸಿಎಂ ವಿಚಾರವಾಗಿ ಮಾತನಾಡಿದ್ದಾರೆ. ಮಠಾಧೀಶರು ಶೋಷಿತರ ಧ್ವನಿಯಾಗಬೇಕೇ ಹೊರತು ಯಾವುದೋ ಒಂದು ಜಾತಿಗೆ ಧ್ವನಿಯಾಗುವುದು ಸರಿಯಲ್ಲ ಎಂದರು.
ನಾವು ಮಠಗಳು ಹಾಗೂ ಮಠಾಧೀಶರಿಗೆ ಗೌರವ ಕೊಡುತ್ತೇವೆ. ಮಠಾಧೀಶರನ್ನು ಅನುಸರಿಸುತ್ತಿದ್ದೇವೆ. ಜಾತಿ ಹಾಗೂ ಸಮಾಜದ ಹೆಸರಿನಲ್ಲಿ ಮಠಾಧಿಪತಿಗಳು ಮನುಷ್ಯತ್ವ ಕೊಲ್ಲುವ ಕೆಲಸಕ್ಕೆ ಹೋಗಬೇಡಿ ಎಂದು ಶೋಷಿತ ಸಮಾಜದ ಪ್ರತಿನಿಧಿಯಾಗಿ ನಿಮ್ಮಲ್ಲಿ ನೋವು ತೋಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.
ಪಕ್ಷಗಳಲ್ಲಿ ಜಾತಿ ಹೆಸರಿನಲ್ಲಿ ಅಧಿಕಾರಿ ನೀಡುವುದು ಸರಿಯಲ್ಲ. ನಮ್ಮ ಪಕ್ಷಕ್ಕೆ ಹೈಕಮಾಂಡ್ ಮಾತೇ ಅಂತಿಮಾ. ಮಠಾಧೀಶರು ಒಂದು ಪಕ್ಷ, ನಾಯಕ ಹಾಗೂ ಜಾತಿ ಪರ ಮಾತನಾಡುವುದನ್ನ ಬಿಟ್ಟು ಎಲ್ಲಾ ಪಕ್ಷ ಹಾಗೂ ನಾಯಕರಿಗೂ ಆಶೀರ್ವಾದ ಮಾಡಬೇಕು ಎಂದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…