Syed Sarfaraz Ahmad wins gold medal
ಮಂಡ್ಯ: ತೈಲ್ಯಾಂಡ್ನಲ್ಲಿ ಮೇ.೨೪ರಂದು ನಡೆದ ೭ ಅಂತರಾಷ್ಟ್ರೀಯ ಮತ್ತು ಥಾಯ್ ಮಾರ್ಷಲ್ ಆರ್ಟ್ಸ್ ಗೇಮ್ಸ್(ISಏಂ) ಕಿಕ್ ಬಾಕ್ಸಿಂಗ್ನಲ್ಲಿ ಮಂಡ್ಯದ ೯ ವರ್ಷದ ಸೈಯದ್ ಸರ್ಫ಼ರಾಜ್ ಅಹ್ಮದ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಬಾಲಕನ ಸಂಬಂಧಿ ಬಿಬಿ ಅಮೀನ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಪಂದ್ಯಾವಳಿಯಲ್ಲಿ ಮಂಡ್ಯದ ಇಬ್ಬರು ವಿದ್ಯಾರ್ಥಿಗಳು ಭಾಗಿಯಾಗಿದ್ದು, ನಗರದ ಮಹ್ಮದ್ ಮಕ್ಕಿ ಹಾಗೂ ಶೀಬಾರ ಪುತ್ರ ಸೈಯದ್ ಸರ್ಫ಼ರಾಜ್ ಅಹ್ಮದ್ ತನ್ನ ಪ್ರಪ್ರಥಮ ಅಂತರಾಷ್ಟ್ರೀಯ ಪದಕ ಗಳಿಸಿದ್ದಾರೆ ಎಂದರು.
ಸೈಯದ್ ಸರ್ಫ಼ರಾಜ್ ಅಹ್ಮದ್ ಮಂಡ್ಯದ ಶ್ರೀಚೈತನ್ಯ ಶಾಲೆಯ ವಿದ್ಯಾರ್ಥಿಯಾಗಿದ್ದು, ತಾನು ೩ ವರ್ಷದ ಬಾಲಕನಾಗಿದ್ದಾಗಿನಿಂದಲೂ ಸ್ಕೇಟಿಂಗ್ ಹಾಗೂ ಕಿಕ್ಬಾಕ್ಸಿಗ್ ತರಬೇತಿಯನ್ನು ಒಶೋಕೈ ಮಾರ್ಷಲ್ ಆರ್ಟ್ಸ್ ಅಕಾಡೆಮಿಯಲ್ಲಿ ಪಡೆಯುತ್ತಿದ್ದು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಪದಕಗಳನ್ನು ಗಳಿಸಿದ್ದಾರೆ ಎಂದು ಹೇಳಿದರು.
ಸ್ಕೇಟಿಂಗ್ ವಿಭಾಗದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ೩೫ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದು, ಕಿಕ್ ಬಾಕ್ಸಿಂಗ್ ವಿಭಾಗದಲ್ಲಿ ೨೫ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಚಿಕ್ಕಂದಿನಿಂದಲೇ ಕ್ರೀಡೆಯಲ್ಲಿ ತೊಡಗಿಸಿ, ಸಾಧನೆಗೆ ಸ್ಪೂರ್ತಿ ತುಂಬಬೇಕು ಎಂದ ಅವರು, ಸೈಯದ್ ಸರ್ಫ಼ರಾಜ್ ಅಹ್ಮದ್ ಒಲಂಪಿಕ್ನಲ್ಲಿಯೂ ಭಾಗವಹಿಸಿ, ಗೆಲ್ಲುವ ವಿಶ್ವಾಸವಿದೆ ಎಂದು ಉತ್ಸಾಹ ತೋರಿದರು.
ಗೋಷ್ಠಿಯಲ್ಲಿ ಚಿನ್ನದ ಪದಕ ವಿಜೇತ ಸೈಯದ್ ಸರ್ಫ಼ರಾಜ್ ಅಹ್ಮದ್, ತಾಯಿ ಶೀಬಾ ಇದ್ದರು.
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…