Syed Sarfaraz Ahmad wins gold medal
ಮಂಡ್ಯ: ತೈಲ್ಯಾಂಡ್ನಲ್ಲಿ ಮೇ.೨೪ರಂದು ನಡೆದ ೭ ಅಂತರಾಷ್ಟ್ರೀಯ ಮತ್ತು ಥಾಯ್ ಮಾರ್ಷಲ್ ಆರ್ಟ್ಸ್ ಗೇಮ್ಸ್(ISಏಂ) ಕಿಕ್ ಬಾಕ್ಸಿಂಗ್ನಲ್ಲಿ ಮಂಡ್ಯದ ೯ ವರ್ಷದ ಸೈಯದ್ ಸರ್ಫ಼ರಾಜ್ ಅಹ್ಮದ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಬಾಲಕನ ಸಂಬಂಧಿ ಬಿಬಿ ಅಮೀನ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಪಂದ್ಯಾವಳಿಯಲ್ಲಿ ಮಂಡ್ಯದ ಇಬ್ಬರು ವಿದ್ಯಾರ್ಥಿಗಳು ಭಾಗಿಯಾಗಿದ್ದು, ನಗರದ ಮಹ್ಮದ್ ಮಕ್ಕಿ ಹಾಗೂ ಶೀಬಾರ ಪುತ್ರ ಸೈಯದ್ ಸರ್ಫ಼ರಾಜ್ ಅಹ್ಮದ್ ತನ್ನ ಪ್ರಪ್ರಥಮ ಅಂತರಾಷ್ಟ್ರೀಯ ಪದಕ ಗಳಿಸಿದ್ದಾರೆ ಎಂದರು.
ಸೈಯದ್ ಸರ್ಫ಼ರಾಜ್ ಅಹ್ಮದ್ ಮಂಡ್ಯದ ಶ್ರೀಚೈತನ್ಯ ಶಾಲೆಯ ವಿದ್ಯಾರ್ಥಿಯಾಗಿದ್ದು, ತಾನು ೩ ವರ್ಷದ ಬಾಲಕನಾಗಿದ್ದಾಗಿನಿಂದಲೂ ಸ್ಕೇಟಿಂಗ್ ಹಾಗೂ ಕಿಕ್ಬಾಕ್ಸಿಗ್ ತರಬೇತಿಯನ್ನು ಒಶೋಕೈ ಮಾರ್ಷಲ್ ಆರ್ಟ್ಸ್ ಅಕಾಡೆಮಿಯಲ್ಲಿ ಪಡೆಯುತ್ತಿದ್ದು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಪದಕಗಳನ್ನು ಗಳಿಸಿದ್ದಾರೆ ಎಂದು ಹೇಳಿದರು.
ಸ್ಕೇಟಿಂಗ್ ವಿಭಾಗದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ೩೫ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದು, ಕಿಕ್ ಬಾಕ್ಸಿಂಗ್ ವಿಭಾಗದಲ್ಲಿ ೨೫ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಚಿಕ್ಕಂದಿನಿಂದಲೇ ಕ್ರೀಡೆಯಲ್ಲಿ ತೊಡಗಿಸಿ, ಸಾಧನೆಗೆ ಸ್ಪೂರ್ತಿ ತುಂಬಬೇಕು ಎಂದ ಅವರು, ಸೈಯದ್ ಸರ್ಫ಼ರಾಜ್ ಅಹ್ಮದ್ ಒಲಂಪಿಕ್ನಲ್ಲಿಯೂ ಭಾಗವಹಿಸಿ, ಗೆಲ್ಲುವ ವಿಶ್ವಾಸವಿದೆ ಎಂದು ಉತ್ಸಾಹ ತೋರಿದರು.
ಗೋಷ್ಠಿಯಲ್ಲಿ ಚಿನ್ನದ ಪದಕ ವಿಜೇತ ಸೈಯದ್ ಸರ್ಫ಼ರಾಜ್ ಅಹ್ಮದ್, ತಾಯಿ ಶೀಬಾ ಇದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…