ಮಂಡ್ಯ

ಥಾಯ್‌ ಮಾರ್ಷಲ್‌ ಆರ್ಟ್ಸ್‌ ಗೇಮ್ಸ್‌ನಲ್ಲಿ ಸೈಯದ್‌ ಸರ್ಫರಾಜ್‌ ಅಹ್ಮದ್‌ಗೆ ಚಿನ್ನದ ಪದಕ

ಮಂಡ್ಯ: ತೈಲ್ಯಾಂಡ್‌ನಲ್ಲಿ ಮೇ.೨೪ರಂದು ನಡೆದ ೭ ಅಂತರಾಷ್ಟ್ರೀಯ ಮತ್ತು ಥಾಯ್ ಮಾರ್ಷಲ್ ಆರ್ಟ್ಸ್ ಗೇಮ್ಸ್(ISಏಂ) ಕಿಕ್ ಬಾಕ್ಸಿಂಗ್‌ನಲ್ಲಿ ಮಂಡ್ಯದ ೯ ವರ್ಷದ ಸೈಯದ್ ಸರ್ಫ಼ರಾಜ್ ಅಹ್ಮದ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಬಾಲಕನ ಸಂಬಂಧಿ ಬಿಬಿ ಅಮೀನ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಪಂದ್ಯಾವಳಿಯಲ್ಲಿ ಮಂಡ್ಯದ ಇಬ್ಬರು ವಿದ್ಯಾರ್ಥಿಗಳು ಭಾಗಿಯಾಗಿದ್ದು, ನಗರದ ಮಹ್ಮದ್ ಮಕ್ಕಿ ಹಾಗೂ ಶೀಬಾರ ಪುತ್ರ ಸೈಯದ್ ಸರ್ಫ಼ರಾಜ್ ಅಹ್ಮದ್ ತನ್ನ ಪ್ರಪ್ರಥಮ ಅಂತರಾಷ್ಟ್ರೀಯ ಪದಕ ಗಳಿಸಿದ್ದಾರೆ ಎಂದರು.

ಸೈಯದ್ ಸರ್ಫ಼ರಾಜ್ ಅಹ್ಮದ್ ಮಂಡ್ಯದ ಶ್ರೀಚೈತನ್ಯ ಶಾಲೆಯ ವಿದ್ಯಾರ್ಥಿಯಾಗಿದ್ದು, ತಾನು ೩ ವರ್ಷದ ಬಾಲಕನಾಗಿದ್ದಾಗಿನಿಂದಲೂ ಸ್ಕೇಟಿಂಗ್ ಹಾಗೂ ಕಿಕ್‌ಬಾಕ್ಸಿಗ್ ತರಬೇತಿಯನ್ನು ಒಶೋಕೈ ಮಾರ್ಷಲ್ ಆರ್ಟ್ಸ್ ಅಕಾಡೆಮಿಯಲ್ಲಿ ಪಡೆಯುತ್ತಿದ್ದು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಪದಕಗಳನ್ನು ಗಳಿಸಿದ್ದಾರೆ ಎಂದು ಹೇಳಿದರು.

ಸ್ಕೇಟಿಂಗ್ ವಿಭಾಗದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ೩೫ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದು, ಕಿಕ್ ಬಾಕ್ಸಿಂಗ್ ವಿಭಾಗದಲ್ಲಿ ೨೫ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಚಿಕ್ಕಂದಿನಿಂದಲೇ ಕ್ರೀಡೆಯಲ್ಲಿ ತೊಡಗಿಸಿ, ಸಾಧನೆಗೆ ಸ್ಪೂರ್ತಿ ತುಂಬಬೇಕು ಎಂದ ಅವರು, ಸೈಯದ್ ಸರ್ಫ಼ರಾಜ್ ಅಹ್ಮದ್ ಒಲಂಪಿಕ್‌ನಲ್ಲಿಯೂ ಭಾಗವಹಿಸಿ, ಗೆಲ್ಲುವ ವಿಶ್ವಾಸವಿದೆ ಎಂದು ಉತ್ಸಾಹ ತೋರಿದರು.

ಗೋಷ್ಠಿಯಲ್ಲಿ ಚಿನ್ನದ ಪದಕ ವಿಜೇತ ಸೈಯದ್ ಸರ್ಫ಼ರಾಜ್ ಅಹ್ಮದ್, ತಾಯಿ ಶೀಬಾ ಇದ್ದರು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago