ಮಂಡ್ಯ

ಗ್ರಾಮ‌ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ: ಡಾ ಹೆಚ್ ಎಲ್ ನಾಗರಾಜು

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ಗ್ರಾಮ‌ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಹೇಳಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಪರೀಕ್ಷೆಯ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಅಕ್ಟೋಬರ್ 26 ರಂದು ಮಧ್ಯಾಹ್ನ 2.30 ರಿಂದ 4.30 ಗಂಟೆಯವರೆಗೆ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆಯ ಕಡ್ಡಾಯ ಕನ್ನಡ ಪರೀಕ್ಷೆಯು ಮಂಡ್ಯ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡ, ಸರ್ಕಾರಿ ಪದವಿ ಪೂರ್ವ ಕಾಲೇಜು (ಮಾಜಿಪುರ ಸಭೆ) ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಅರ್ಕೇಶ್ವರ ನಗರದಲ್ಲಿ ಒಟ್ಟು 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 1142 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಅಕ್ಟೋಬರ್ 27 ರಂದು ಬೆಳಿಗ್ಗೆ 10.30 ರಿಂದ 12.30 ಹಾಗೂ ಮಧ್ಯಾಹ್ನ 2.30 ರಿಂದ 4.30 ಗಂಟೆಯವರೆಗೆ ಎರಡು ಅಧಿವೇಶನಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ 10,301 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಮಂಡ್ಯ -12, ಕೃಷ್ಣರಾಜಪೇಟೆ-2, ಮದ್ದೂರು-3 ಮಳವಳ್ಳಿ -2, ನಾಗಮಂಗಲ-2, ಪಾಂಡವಪುರ-1, ಶ್ರೀರಂಗಪಟ್ಟಣ – 1ರಂತೆ ಮಂಡ್ಯ ಜಿಲ್ಲಾದ್ಯಂತ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ‌ ಎಂದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧೀಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶ ಹೊರಡಿಸಲಾಗುವುದು ಎಂದರು.

ಪರೀಕ್ಷೆಗೆ ತಡವಾಗಿ ಬಂದ ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸುವಂತಿಲ್ಲ ಹಾಗೂ ಪರೀಕ್ಷೆ ನಡೆಯುವಾಗ ಅರ್ಧಕ್ಕೆ ಅಭ್ಯರ್ಥಿಗಳನ್ನು ಕೊಠಡಿಯಿಂದ ಹೊರಗೆ ಕಳುಹಿಸುವಂತಿಲ್ಲ ಎಂದು ತಿಳಿಸಿದರು.

ಪರೀಕ್ಷಾ ಪರಿವೀಕ್ಷಕರು ಎಚ್ಚರಿಕೆಯಿಂದ ಪ್ರಶ್ನೆಪತ್ರಿಕೆಯನ್ನು ನೋಡಿಕೊಳ್ಳಬೇಕು, ಪರೀಕ್ಷೆ ಪ್ರಾರಂಭವಾಗುವುದಕ್ಕು ಒಂದು ಗಂಟೆ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಕ್ರಮವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು, ಪ್ರಶ್ನೆ ಪತ್ರಿಕೆಯ ಕವರ್ ತೆರೆದಿರುವುದಿಲ್ಲ ಎಂದು ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ಪರೀಕ್ಷಾ ಮೇಲ್ವಿಚಾರಕರುಗಳ ಮೇಲೆ ಇರಲಿವೆ ಎಂದು ಹೇಳಿದರು.

ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ಮತ್ತು ಗೈರುಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಆನ್ಲೈನ್ ಮೂಲಕ ದಾಖಲಿಸುವಂತೆ ಪರೀಕ್ಷಾ ಕೇಂದ್ರಗಳ ಉಪಮುಖ್ಯ ಅಧೀಕ್ಷಕರುಗಳು/ ಪ್ರಾಂಶುಪಾಲರುಗಳಿಗೆ ಸೂಚಿಸಿದರು.

ಅಭ್ಯರ್ಥಿಗಳು ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಪೆನ್ ಡ್ರೈವ್ಗಳು, ಇಯರ್ ಫೋನ್ ಗಳು, ಮೈಕ್ರೋ ಫೋನ್ ಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿ ಒಳಗೆ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಡ್ರೆಸ್‌ ಕೋಡ್‌ ಪಾಲನೆ ಕಡ್ಡಾಯ
ಅಭ್ಯರ್ಥಿಗಳು ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ಸಲುವಾಗಿ ಫುಲ್ ಶರ್ಟ್, ಶೂ, ಟೋಪಿ ಧರಿಸುವುದನ್ನು ಬಾಯಿ, ಕಿವಿ ಹಾಗೂ ತಲೆಮುಚ್ಚುವ ವಸ್ತ್ರವನ್ನು/ಸಾಧನವನ್ನು ಧರಿಸುವುದನ್ನು ನಿಷೇಧಿಸಿದ್ದು, ಯಾವುದೇ ರೀತಿಯ ಮಾಸ್ಕನ್ನು ಧರಿಸಿ ಪರೀಕ್ಷಾ ಕೇಂದ್ರದ ಒಳಗೆ ಬರುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಮಾಂಗಲ್ಯ ಸರ ಹಾಗೂ ಮೂಗುತಿಯನ್ನು ಹೊರತುಪಡಿಸಿ ಇನ್ನಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದರು.

ಕೆಇಎ ವತಿಯಿಂದ ನಡೆಸಲಾಗುವ ಸದರಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಲೋಪ ದೋಷಗಳು ಉಂಟಾಗದ ರೀತಿಯಲ್ಲಿ ಬಹಳ ಎಚ್ಚರಿಕೆಯಿಂದ ಹಾಗೂ ಜಾಗೃತವಾಗಿ ಕರ್ತವ್ಯ ನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೂ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ಚೆಲುವಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ ಬಿ ವಿ ನಂದೀಶ್, ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ರವಿಶಂಕರ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೇಶವಮೂರ್ತಿ ಸೇರಿದಂತೆ ವಿವಿಧ ಕಾಲೇಜುಗಳ ಅಧ್ಯಾಪಕರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago