ಮಂಡ್ಯ

ಸ್ಕ್ಯಾನಿಂಗ್ ಸೆಂಟರ್‌ಗೆ ತಹಸಿಲ್ದಾರ್ ಅನಿರೀಕ್ಷಿತ ಭೇಟಿ : ದಾಖಲೆ ಪರಿಶೀಲನೆ

ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಸ್ಕ್ಯಾನಿಂಗ್ ಮಾಡಿಸಿರುವ ಗರ್ಭಿಣಿ ಮಹಿಳೆಯರ ದಾಖಲೆಗಳು ಮತ್ತು ಫಾರಂಗಳನ್ನು ಪರಿಶೀಲನೆ ನಡೆಸಿದರು. ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿ ಮತ್ತು ಅನುಷ್ಠಾನಗೊಳಿಸಬೇಕು, ಗರ್ಭಿಣಿ ಮಹಿಳೆ ಹಾಗೂ ಬರುವ ಪೋಷಕರಿಗೆ ಜಾಗೃತಿ ಮೂಡಿಸಲು ಹಾಗೂ ಎಚ್ಚರಿಕೆ ನೀಡಿಲು ಶಿಕ್ಷೆ, ದಂಡ ಹಾಗು ಹೆಣ್ಣು ಮಕ್ಕಳ ಮಹತ್ವ, ಲಿಂಗಪತ್ತೆ ಕಾನೂನು ಬಾಹಿರ ಎಂದು ಸಾರುವ ಸೂಚನಾ ಫಲಕಗಳನ್ನು ಸ್ಥಳೀಯ ಬಾಷೆಯಲ್ಲಿ ದೊಡ್ಡ ಗಾತ್ರದಲ್ಲಿ ಪ್ರದರ್ಶನ ಮಾಡಲು ಸೂಚಿಸಿದರು.

ದಾಖಲೆಗಳನ್ನು ಕಡ್ಡಾಯವಾಗಿ ಎರಡು ವರ್ಷಗಳವರೆಗೆ ಇಟ್ಟಿರಬೇಕು, ಬಾಲ ಗರ್ಭಿಣಿ ಬಂದಂತಹ ಸಂದರ್ಭದಲ್ಲಿ ತಾಲ್ಲೂಕು ಆಡಳಿತಕ್ಕೆ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳ ಮುಂದಿನ ಕ್ರಮಕ್ಕಾಗಿ ಕಡ್ಡಾಯವಾಗಿ ತಿಳಿಸುವಂತೆ ಸೂಚಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಲಾಗುವುದು. ಕಾನುನು ಉಲ್ಲಂಘನೆ ಮಾಡಿದರೆ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಕ್ರಮ ಕೈಗೊಳುತ್ತೇವೆ ಎಂದು ಎಚ್ಚರಿಸಿದರು.

ತಪಾಸಣೆ ವೇಳೆ ತಹಸಿಲ್ದಾರ್ ಪರಶುರಾಮ್ ಸತ್ತಿಗೇರಿ, ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್, ಡಿ೨ ಸ್ಕ್ಯಾನಿಂಗ್ ಸೆಂಟರ್ ಮಾಲೀಕರಾದ ಡಾ.ದೀಪಕ್ ಗೌತಮ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

8 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

22 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

22 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

22 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

22 hours ago