ಮಂಡ್ಯ

ಮಳೆ, ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಎಚ್ಚರಿಕೆ ವಹಿಸಿ: ಡಾ.ಕುಮಾರ

ಮಂಡ್ಯ: ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಮೇ.೮) ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯ ಮಳೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯ ಜೊತೆ ಹೆಚ್ಚಿನ ಗಾಳಿಯು ಸಂಭವಿಸಲಿದೆ. ಕೂಡಲೇ ಎಲ್ಲಾ ಇಲಾಖೆಯವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಸಂಬಂಧಪಟ್ಟ ಇಲಾಖೆಗಳು ಮುನ್ನಚ್ಚರಿಕೆ ಕ್ರಮಗಳನ್ನು ವಹಿಸದ ಕಾರಣ ಮಳೆ ಅಥವಾ ಬಿರುಗಾಳಿಯಿಂದ ಪ್ರಾಣ ಹಾನಿಯಾಗುತ್ತಿದೆ. ಇದು ಮುಂದಿವರೆದರೆ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಅರಣ್ಯ ಇಲಾಖೆಯೊಂದಿಗೆ ಜಂಟಿಯಾಗಿ ರಸ್ತೆಗೆ ಚಾಚಿಕೊಂಡಿರುವ ದುರ್ಬಲ ಕೊಂಬೆಗಳನ್ನು ತೆರವುಗೊಳಿಸಿ. ಮಳೆ ಬಂದ ಸಂದರ್ಭದಲ್ಲಿ ಮರಗಳು, ವಿದ್ಯುತ್ ಕಂಬಗಳು ಗಾಳಿಯಿಂದ ಬಿದ್ದು ಹೋದಲ್ಲಿ ಅವುಗಳನ್ನು ತಕ್ಷಣ ತೆರವುಗೊಳಿಸುವಲ್ಲಿ ಇಲಾಖೆ ಸಜ್ಜಾಗಿರಬೇಕು. ಮಳೆಯ ಸಂದರ್ಭದಲ್ಲಿ ಕ್ಷಿಪ್ರವಾಗಿ ಕೆಲಸ ನಿರ್ವಹಿಸಲು ತಂಡಗಳನ್ನು ರಚಿಸಿಕೊಳ್ಳಿ ಎಂದರು.

ಒಳಚರಂಡಿಗಳಲ್ಲಿ ಕಸ ಹಾಗೂ ಇನ್ನಿತರೆ ವಸ್ತುಗಳು ಸೇರಿಕೊಂಡರೇ ಮಳೆ ನೀರು ಹರಿಯುವಿಕೆಗೆ ತೊಂದರೆಯಾಗುತ್ತದೆ. ಆಗಾಗಿ ಒಳಚರಂಡಿಗಳನ್ನು ದಿನನಿತ್ಯ ಸ್ವಚ್ಚಗೊಳಿಸಿ ಕಸ ತೆರವುಗೊಳಿಸಿ ಎಂದು ಹೇಳಿದರು.

ಈ ಹಿಂದೆ ಮಳೆಯಿಂದ ಮುಳುಗಡೆಯಾದ ಅಥವಾ ಹಾನಿಗೊಳಗಾದ ಗ್ರಾಮಗಳನ್ನು ಪಟ್ಟಿ ಮಾಡಿಕೊಳ್ಳಿ. ನುರಿತ ಈಜುಗಾರರು, ಜೆ.ಸಿ.ಬಿ ಹಾಗೂ ಹಿಟ್ಯಾಚಿ ಮಾಲೀಕರ ಸಂಪರ್ಕ ಸಂಖ್ಯೆಗಳನ್ನು ಸಂಗ್ರಾಹಿಸಿಟ್ಟಿಕೊಳ್ಳಿ. ಮಳೆಯಿಂದ ಮನೆ ಹಾನಿ ಅಥವಾ ಬೆಳೆ ಹಾನಿಯಾದಲ್ಲಿ ತಕ್ಷಣ ಪರಿಶೀಲಿಸಿ ತಹಶೀಲ್ದಾರ್ ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜೊತೆಗೆ ವಿದ್ಯುತ್ ಕಂಬಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದರು.

ಮಳೆ ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮರಗಳ ಕೆಳಗಡೆ ವಾಹನಗಳ ನಿಲುಗಡೆ ಮಾಡದಂತೆ ಹಾಗೂ ಇನ್ನಿತರೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಎಂದರು.

ಕಂಟ್ರೋಲ್‌ ರೂ ಸ್ಥಾಪನೆ
ತಾಲ್ಲೂಕುವಾರು ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯತ್, ನಗರ ಸ್ಥಳೀಯ ಸಂಸ್ಥೆ, ಚೆಸ್ಕಾಂ ಹಾಗೂ ಅರಣ್ಯ ಇಲಾಖೆಗಳಲ್ಲಿ 2 ದಿನದೊಳಗಾಗಿ ಕಂಟ್ರೋಲ್ ರೂಂ ತೆರೆದು ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳ ವಿವರವನ್ನು ಮಾಹಿತಿಗಾಗಿ ಅನಾವರಣಗೊಳಿಸಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ: ಹೆಚ್. ಎಲ್ ನಾಗರಾಜು, ಪಾಂಡವಪುರ ಉಪವಿಭಾಗಾಧಿಕಾರಿ ಮಾರುತಿ, ಚೆಸ್ಕಾಂ ಅಧೀಕ್ಷಕ ಅಭಿಯಂತರ ಸೋಮಶೇಖರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ತೋಟಗಾರಿಕೆ‌ ಇಲಾಖೆ ಉಪನಿರ್ದೇಶಕಿ ರೂಪಶ್ರೀ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

2 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

2 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

2 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

5 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

5 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago