ಮಂಡ್ಯ: ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಮೇ.೮) ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯ ಮಳೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯ ಜೊತೆ ಹೆಚ್ಚಿನ ಗಾಳಿಯು ಸಂಭವಿಸಲಿದೆ. ಕೂಡಲೇ ಎಲ್ಲಾ ಇಲಾಖೆಯವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಂಬಂಧಪಟ್ಟ ಇಲಾಖೆಗಳು ಮುನ್ನಚ್ಚರಿಕೆ ಕ್ರಮಗಳನ್ನು ವಹಿಸದ ಕಾರಣ ಮಳೆ ಅಥವಾ ಬಿರುಗಾಳಿಯಿಂದ ಪ್ರಾಣ ಹಾನಿಯಾಗುತ್ತಿದೆ. ಇದು ಮುಂದಿವರೆದರೆ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಅರಣ್ಯ ಇಲಾಖೆಯೊಂದಿಗೆ ಜಂಟಿಯಾಗಿ ರಸ್ತೆಗೆ ಚಾಚಿಕೊಂಡಿರುವ ದುರ್ಬಲ ಕೊಂಬೆಗಳನ್ನು ತೆರವುಗೊಳಿಸಿ. ಮಳೆ ಬಂದ ಸಂದರ್ಭದಲ್ಲಿ ಮರಗಳು, ವಿದ್ಯುತ್ ಕಂಬಗಳು ಗಾಳಿಯಿಂದ ಬಿದ್ದು ಹೋದಲ್ಲಿ ಅವುಗಳನ್ನು ತಕ್ಷಣ ತೆರವುಗೊಳಿಸುವಲ್ಲಿ ಇಲಾಖೆ ಸಜ್ಜಾಗಿರಬೇಕು. ಮಳೆಯ ಸಂದರ್ಭದಲ್ಲಿ ಕ್ಷಿಪ್ರವಾಗಿ ಕೆಲಸ ನಿರ್ವಹಿಸಲು ತಂಡಗಳನ್ನು ರಚಿಸಿಕೊಳ್ಳಿ ಎಂದರು.
ಒಳಚರಂಡಿಗಳಲ್ಲಿ ಕಸ ಹಾಗೂ ಇನ್ನಿತರೆ ವಸ್ತುಗಳು ಸೇರಿಕೊಂಡರೇ ಮಳೆ ನೀರು ಹರಿಯುವಿಕೆಗೆ ತೊಂದರೆಯಾಗುತ್ತದೆ. ಆಗಾಗಿ ಒಳಚರಂಡಿಗಳನ್ನು ದಿನನಿತ್ಯ ಸ್ವಚ್ಚಗೊಳಿಸಿ ಕಸ ತೆರವುಗೊಳಿಸಿ ಎಂದು ಹೇಳಿದರು.
ಈ ಹಿಂದೆ ಮಳೆಯಿಂದ ಮುಳುಗಡೆಯಾದ ಅಥವಾ ಹಾನಿಗೊಳಗಾದ ಗ್ರಾಮಗಳನ್ನು ಪಟ್ಟಿ ಮಾಡಿಕೊಳ್ಳಿ. ನುರಿತ ಈಜುಗಾರರು, ಜೆ.ಸಿ.ಬಿ ಹಾಗೂ ಹಿಟ್ಯಾಚಿ ಮಾಲೀಕರ ಸಂಪರ್ಕ ಸಂಖ್ಯೆಗಳನ್ನು ಸಂಗ್ರಾಹಿಸಿಟ್ಟಿಕೊಳ್ಳಿ. ಮಳೆಯಿಂದ ಮನೆ ಹಾನಿ ಅಥವಾ ಬೆಳೆ ಹಾನಿಯಾದಲ್ಲಿ ತಕ್ಷಣ ಪರಿಶೀಲಿಸಿ ತಹಶೀಲ್ದಾರ್ ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜೊತೆಗೆ ವಿದ್ಯುತ್ ಕಂಬಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಮಳೆ ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮರಗಳ ಕೆಳಗಡೆ ವಾಹನಗಳ ನಿಲುಗಡೆ ಮಾಡದಂತೆ ಹಾಗೂ ಇನ್ನಿತರೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಎಂದರು.
ಕಂಟ್ರೋಲ್ ರೂ ಸ್ಥಾಪನೆ
ತಾಲ್ಲೂಕುವಾರು ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯತ್, ನಗರ ಸ್ಥಳೀಯ ಸಂಸ್ಥೆ, ಚೆಸ್ಕಾಂ ಹಾಗೂ ಅರಣ್ಯ ಇಲಾಖೆಗಳಲ್ಲಿ 2 ದಿನದೊಳಗಾಗಿ ಕಂಟ್ರೋಲ್ ರೂಂ ತೆರೆದು ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳ ವಿವರವನ್ನು ಮಾಹಿತಿಗಾಗಿ ಅನಾವರಣಗೊಳಿಸಬೇಕು ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…