ಮಂಡ್ಯ

ಗೋವು, ಒಂಟೆ ವಧೆ ತಡೆಗೆ ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಕುಮಾರ ಸೂಚನೆ

ಮಂಡ್ಯ : ಜೂನ್‌ 7ರಂದು ಬಕ್ರಿದ್ ಹಬ್ಬದ ಸಮಯದಲ್ಲಿ ಗೋವು ಹಾಗೂ ಒಂಟೆಗಳ ವಧೆ ಮತ್ತು ಸಾಗಣೆ ತಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೋವು ಹಾಗೂ ಒಂಟೆ ವಧೆ ಕಾನೂನು ಬಾಹಿರ ಚಟುವಟಿಕೆ ಆಗಿದೆ. ಜಿಲ್ಲೆಯ ರಾಮನಗರ ಮದ್ದೂರು ಗಡಿ ಭಾಗ ಹಾಗೂ ನಾಗಮಂಗಲ-ಕೆ.ಆರ್ ಪೇಟೆ ಗಡಿಭಾಗದಲ್ಲಿ ಅಕ್ರಮ ಪ್ರಾಣಿ ಸಾಗಾಣಿಕೆ ನಡೆಯಬಹುದಾಗಿದ್ದು, ಈ ಕುರಿತು ನಿಗಾ ವಹಿಸಿ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಅಗತ್ಯ ಸಿಬಂದಿಗಳನ್ನು ನಿಯೋಜಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು ಒಂಟೆ, ಹಸು ಬಲಿ ಕೊಡದಿರುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಕ್ರಿದ್ ಹಬ್ಬದ ದಿನದಂದು ಪಶುಪಾಲನ ಇಲಾಖೆ ಅರಣ್ಯ ಇಲಾಖೆ ಸಾರಿಗೆ ಇಲಾಖೆ ನಗರಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಪ್ರಾಣಿ ಬಲಿ ತಡೆಗಟ್ಟುವ ಸಂಬಂಧ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.

ಮದ್ದೂರು ತಾಲೂಕಿನ ಭೂತಗೆರೆಯಲ್ಲಿ ಸರ್ಕಾರಿ ಘೋಷಾಲೆಯು ಪ್ರಾರಂಭಗೊಂಡಿದ್ದು ಅಕ್ರಮ ಸಾಗಾಣಿಕೆ ಗೋವುಗಳನ್ನು ಸದರಿ ಘೋಶಾಲೆಗೆ ಬಿಡಬಹುದಾಗಿದೆ, ಜಾನುವಾರುಗಳ ಸಾಗಾಣಿಕೆ ಮಾಡಲು ಇಲಾಖೆಯಿಂದ ಸಾಗಾಣಿಕೆ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಸದರಿ ಪ್ರಮಾಣ ಪತ್ರವನ್ನು ಸಾಗಾಣಿಕೆ ಸಂದರ್ಭದಲ್ಲಿ ಸಾಗಾಣಿಕೆದಾರರು ಕಡ್ಡಾಯವಾಗಿ ಹೊಂದಿರಬೇಕು ಎಂದು ತಿಳಿಸಿದರು.

ಸಾತನೂರಿನ ಆದಿಚುಂಚನಗಿರಿ ಗೋಶಾಲೆ, ಆದಿಚುಂಚನಗಿರಿ ಕ್ಷೇತ್ರದ ಆದಿಚುಂಚನಗಿರಿ ಗೋಶಾಲೆ, ದೊಡ್ಡ ಬ್ಯಾಡರಹಳ್ಳಿಯ ಧ್ಯಾನ್ ಫೌಂಡೇಶನ್ ಕೊರಕ್ಷಾ ಟ್ರಸ್ಟ್, (ಚೈತ್ರ ಗೋಶಾಲೆ), ಕೆರೆತೊಣ್ಣುರಿನ ಯತಿರಾಜ ಸೇವಾ ಟ್ರಸ್ಟ್, ಅರಕನಹಳ್ಳಿಯ ಕೃಷ್ಣ ಗಿರಿ ಗೋಶಾಲೆ ಟ್ರಸ್ಟ್, ಹೊಸಗಾವಿಯ ಗಣೇಶ ದೇಶಿ ಗೋಶಾಲೆ ಟ್ರಸ್ಟ್ ಗಳ 2025-26 ನೇ ಸಾಲಿನಲ್ಲಿ ಸರ್ಕಾರದಿಂದ ಸಹಾಯಧನ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಶುವೈದ್ಯಾಧಿಕಾರಿ ಸುರೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

ಆಂದೋಲನ ಡೆಸ್ಕ್

Recent Posts

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…

33 mins ago

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

16 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

16 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

16 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

16 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

16 hours ago