ಮಂಡ್ಯ

ಗೋವು, ಒಂಟೆ ವಧೆ ತಡೆಗೆ ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಕುಮಾರ ಸೂಚನೆ

ಮಂಡ್ಯ : ಜೂನ್‌ 7ರಂದು ಬಕ್ರಿದ್ ಹಬ್ಬದ ಸಮಯದಲ್ಲಿ ಗೋವು ಹಾಗೂ ಒಂಟೆಗಳ ವಧೆ ಮತ್ತು ಸಾಗಣೆ ತಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗೋವು ಹಾಗೂ ಒಂಟೆ ವಧೆ ಕಾನೂನು ಬಾಹಿರ ಚಟುವಟಿಕೆ ಆಗಿದೆ. ಜಿಲ್ಲೆಯ ರಾಮನಗರ ಮದ್ದೂರು ಗಡಿ ಭಾಗ ಹಾಗೂ ನಾಗಮಂಗಲ-ಕೆ.ಆರ್ ಪೇಟೆ ಗಡಿಭಾಗದಲ್ಲಿ ಅಕ್ರಮ ಪ್ರಾಣಿ ಸಾಗಾಣಿಕೆ ನಡೆಯಬಹುದಾಗಿದ್ದು, ಈ ಕುರಿತು ನಿಗಾ ವಹಿಸಿ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಅಗತ್ಯ ಸಿಬಂದಿಗಳನ್ನು ನಿಯೋಜಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು ಒಂಟೆ, ಹಸು ಬಲಿ ಕೊಡದಿರುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಕ್ರಿದ್ ಹಬ್ಬದ ದಿನದಂದು ಪಶುಪಾಲನ ಇಲಾಖೆ ಅರಣ್ಯ ಇಲಾಖೆ ಸಾರಿಗೆ ಇಲಾಖೆ ನಗರಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಪ್ರಾಣಿ ಬಲಿ ತಡೆಗಟ್ಟುವ ಸಂಬಂಧ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.

ಮದ್ದೂರು ತಾಲೂಕಿನ ಭೂತಗೆರೆಯಲ್ಲಿ ಸರ್ಕಾರಿ ಘೋಷಾಲೆಯು ಪ್ರಾರಂಭಗೊಂಡಿದ್ದು ಅಕ್ರಮ ಸಾಗಾಣಿಕೆ ಗೋವುಗಳನ್ನು ಸದರಿ ಘೋಶಾಲೆಗೆ ಬಿಡಬಹುದಾಗಿದೆ, ಜಾನುವಾರುಗಳ ಸಾಗಾಣಿಕೆ ಮಾಡಲು ಇಲಾಖೆಯಿಂದ ಸಾಗಾಣಿಕೆ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಸದರಿ ಪ್ರಮಾಣ ಪತ್ರವನ್ನು ಸಾಗಾಣಿಕೆ ಸಂದರ್ಭದಲ್ಲಿ ಸಾಗಾಣಿಕೆದಾರರು ಕಡ್ಡಾಯವಾಗಿ ಹೊಂದಿರಬೇಕು ಎಂದು ತಿಳಿಸಿದರು.

ಸಾತನೂರಿನ ಆದಿಚುಂಚನಗಿರಿ ಗೋಶಾಲೆ, ಆದಿಚುಂಚನಗಿರಿ ಕ್ಷೇತ್ರದ ಆದಿಚುಂಚನಗಿರಿ ಗೋಶಾಲೆ, ದೊಡ್ಡ ಬ್ಯಾಡರಹಳ್ಳಿಯ ಧ್ಯಾನ್ ಫೌಂಡೇಶನ್ ಕೊರಕ್ಷಾ ಟ್ರಸ್ಟ್, (ಚೈತ್ರ ಗೋಶಾಲೆ), ಕೆರೆತೊಣ್ಣುರಿನ ಯತಿರಾಜ ಸೇವಾ ಟ್ರಸ್ಟ್, ಅರಕನಹಳ್ಳಿಯ ಕೃಷ್ಣ ಗಿರಿ ಗೋಶಾಲೆ ಟ್ರಸ್ಟ್, ಹೊಸಗಾವಿಯ ಗಣೇಶ ದೇಶಿ ಗೋಶಾಲೆ ಟ್ರಸ್ಟ್ ಗಳ 2025-26 ನೇ ಸಾಲಿನಲ್ಲಿ ಸರ್ಕಾರದಿಂದ ಸಹಾಯಧನ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಶುವೈದ್ಯಾಧಿಕಾರಿ ಸುರೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

ಆಂದೋಲನ ಡೆಸ್ಕ್

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

30 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago