ಮಂಡ್ಯ : ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ. ಆದ್ದರಿಂದಲೇ ನಾಗಮಂಗಲದ ಮಸೀದಿ ಮುಂದೆ ಸಾಗುವ ಕೆಲವು ಗಣಪತಿ ವಿಗ್ರಹಗಳ ಮೆರವಣಿಗೆಗೆ ನಿರ್ಭಂಧ ಹೇರಲಾಗಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲಿನಿಂದಲೂ ನಾಗಮಂಗಲದ ಮಸೀದಿ ಮುಂದೆ ಸಾಗುತ್ತಿದ್ದ ಕೆಲವು ಗಣಪತಿ ಮೆರವಣಿಗೆಗೆ ಅನುಮತಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೊಸದಾಗಿ ಪ್ರತಿಷ್ಠಾಪಿಸಲಾದ ಗಣೇಶ ವಿಗ್ರಹಗಳ ಮಸೀದಿ ದಾರಿಯಲ್ಲಿ ಹೋಗಲು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ಕ್ಯಾಬಿನೆಟ್ ನಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಶಾಸಕರಿಗೂ ಗಣಪತಿ ಪ್ರತಿಷ್ಠಾಪನೆ ಮತ್ತು ಮೆರವಣಿಗೆಯ ಕುರಿತು ಒತ್ತಡದಿಂದ ತೀರ್ಮಾನ ತೆಗೆದುಕೊಳ್ಳಬೇಡಿ ಹಾಗೂ ಯಾವುದೇ ಅಹಿತಕರ ಘಟನೆ ಉಂಟಾಗದಂತೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲೂ ಸಹ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಸೂಕ್ತವಾಗಿ ಗಣಪತಿ ವಿಸರ್ಜನೆ ಮಾಡಲು ತಿಳಿಸಿದ್ದೇನೆ ಎಂದರು.
ಧರ್ಮಸ್ಥಳ ಯಾರ ಆಸ್ತಿಯೂ ಅಲ್ಲ
ಧರ್ಮಸ್ಥಳ ಯಾರ ಆಸ್ತಿಯೂ ಅಲ್ಲ, ಶಿವನ ದರ್ಶನ ಯಾರು ಬೇಕಾದರೂ ಪಡೆಯಬಹುದು. ಧರ್ಮಸ್ಥಳದ ಮೇಲೆ ನನಗೆ ಅಪಾರವಾದ ನಂಬಿಕೆ ಇದೆ. ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ಅಂಟಿದ್ದ ಕಳಂಕವನ್ನು ತೊಡೆದು ಹಾಕಿ. ಹಾದಿ ಬೀದಿಯಲ್ಲಿ ಧರ್ಮಸ್ಥಳದ ಕುರಿತು ಮಾತನಾಡುತ್ತಿದ್ದವರನ್ನು ಸ್ತಬ್ಧ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರುಗಳು ಎಂದು ಹೇಳಿದರು.
ಎಸ್ ಐ ಟಿ ತನಿಖೆ ನಡೆಸದೆ ಹೋಗಿದ್ದರೆ ದಿನ ನಿತ್ಯ ಧರ್ಮಸ್ಥಳ ಕ್ಷೇತ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುತ್ತಲೇ ಇರುತ್ತಿದ್ದರು ಎಂದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…